ಬೆಳಗಾವಿ: ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಸೆಪ್ಟೆಂಬರ್ 5ರಂದು ಬೆಳಗ್ಗೆ 11 ಗಂಟೆಗೆ ನಗರದ ಸೇಂಟ್ ಅಂಥೋನಿ ಪ್ರೌಢಶಾಲೆಯಲ್ಲಿ ಬೆಳಗಾವಿ ಶೈಕ್ಷಣಿಕ ಜಿಲ್ಲಾಮಟ್ಟದ ಶಿಕ್ಷಕರ ದಿನ ಕಾರ್ಯಕ್ರಮ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಉದ್ಘಾಟಿಸುವರು.
ಡಿಸಿಎಂ ಲಕ್ಷ್ಮಣ ಸವದಿ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವರು. ಜವಳಿ ಸಚಿವ ಶ್ರೀಮಂತ ಪಾಟೀಲ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಶಿಕ್ಷಕರನ್ನು ಸನ್ಮಾನಿಸುವರು. ಶಾಸಕ ಅನಿಲ ಬೆನಕೆ ಅಧ್ಯಕ್ಷತೆ ವಹಿಸುವರು.