More

    ನಾಳೆ ಕನಕದಾಸರ 536ನೇ ಜಯಂತ್ಯುತ್ಸವ

    ಮೂಡಲಗಿ: ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ಮಠದ ಆವರಣದಲ್ಲಿ ಡಿ.10 ರಂದು ಮಧ್ಯಾಹ್ನ 3 ಗಂಟೆಗೆ ವಿವಿಧ ಮಠಾಧೀಶರ ಸಾನ್ನಿಧ್ಯದಲ್ಲಿ ತಾಲೂಕುಮಟ್ಟದ ಭಕ್ತ ಕನಕದಾಸರ 536ನೇ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ಪ್ರದೇಶ ತಾಲೂಕು ಕುರುಬರ ಸಂಘದ ಅಧ್ಯಕ್ಷ ಡಾ.ಎಸ್.ಎಸ್.ಪಾಟೀಲ ಹೇಳಿದರು. ಪಟ್ಟಣದ ಪ್ರತಿಕಾ ಕಾರ್ಯಾಲಯದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ಜಿಪಂ ಮಾಜಿ ಸದಸ್ಯ ಭೀಮಶಿ ಮಗದುಮ ಮಾತನಾಡಿ, ಸುಣಧೋಳಿ ಶಿವಾನಂದ ಸ್ವಾಮೀಜಿ, ಕವಲಗುಡ್ಡ ಅಮರೇಶ್ವರ ಮಹಾರಾಜರು, ಕಪರಟ್ಟಿಯ ಬಸವರಾಜ ಹಿರೇಮಠ ಸ್ವಾಮೀಜಿ, ಜೋಕಾನಟ್ಟಿಯ ಬಿಳಿಯಾನ್ ಸಿದ್ದ ಶ್ರೀಗಳು ಸಾನ್ನಿಧ್ಯ ವಹಿಸುವರು ಎಂದರು.

    ಪ್ರಭಾ ಶುಗರ್ಸ್‌ ನಿರ್ದೇಶಕ ಗಿರೀಶ ಹಳ್ಳೂರ ಮಾತನಾಡಿ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವರು. ಶಾಸಕ ಬಾಲಚಂದ್ರ ಜಾರಕಿಹೊಳಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕ ರಮೇಶ ಜಾರಕಿಹೊಳಿ, ವಿಪ ಮಾಜಿ ಸದಸ್ಯ ವಿವೇಕರಾವ್ ಪಾಟೀಲ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಮತ್ತಿತರರು ಭಾಗವಹಿಸುವರು ಎಂದರು. ಪುರಸಭೆ ಸದಸ್ಯ ಹನುಮಂತ ಗುಡ್ಲಮನ್ನಿ, ವೀರಣ್ಣ ಮೋಡಿ, ಭೀಮಶಿ ಮಂಗಿ, ಪರಮಾನಂದ ತುಬಾಕಿ, ಸಂತೋಷ ಕಮತಿ, ಸಿದ್ಧಾರೂಢ ಮಬನೂರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts