ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಉನ್ನತ ಕಮಾಂಡರ್, ಮೋಸ್ಟ್ ವಾಂಟೆಡ್ ಉಗ್ರ ರಿಯಾಜ್ ನಾಯ್ಕೂ ಹತ್ಯೆಯಾಗಿದ್ದಾನೆ.
ಪುಲ್ವಾಮಾದ ಆವಂತಿಪುರದ ಬೀಗ್ಪೊರಾ ಗುಲಾಜಾಪುರದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ರಿಯಾಜ್ ಹತ್ಯೆಯಾಗಿದ್ದಾನೆ ಎಂದು ಸೇನೆಯ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಮೊದಲು ಉಗ್ರ ರಿಯಾಜ್ನನ್ನು ಸೆರೆ ಹಿಡಿಯಲಾಗಿದೆ ಎಂಬ ಸುದ್ದಿ ಹರಡಿತ್ತು. ಆದರೆ ಅಂತಿಮವಾಗಿ ಆತ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ ಎಂದು ಸೇನೆ ತಿಳಿಸಿದೆ.
ರಿಯಾಜ್ ವಾಸವಾಗಿದ್ದ ಗ್ರಾಮದಲ್ಲೇ ಗುಂಡಿನ ದಾಳಿ ನಡೆದಿದೆ. ದಾಳಿಯಲ್ಲಿ ರಿಯಾಜ್ ಹಾಗೂ ಇಬ್ಬರು ಇಗ್ರರು ಹತರಾಗಿದ್ದಾರೆ.
ಇದನ್ನೂ ಓದಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ 2,672 ಕಾನ್ಸ್ಟೆಬಲ್, 162 ಎಸ್ಐ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಉಗ್ರ ರಿಯಾಜ್ ಹಾಗೂ ಆತನ ತಂಡ ಬೀಗ್ಪೊರಾದಲ್ಲಿ ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಪಡೆದ ಸೇನೆ ಮಂಗಳವಾರ ತಡ ರಾತ್ರಿ ಉಗ್ರರ ಅಡಗು ದಾಣ ಸುತ್ತುವರಿಯಿತು. ಯೋಧರು ಸುತ್ತುವರಿದಿರುವುದನ್ನು ಗಮನಿಸಿದ ಉಗ್ರರು ಗುಂಡಿನ ದಾಳಿ ಆರಂಭಿಸಿದರು. ಯೋಧರು ಪ್ರತಿ ದಾಳಿ ನಡೆಸಿದರು.
ದಾಳಿ ನಂತರ ಸ್ಥಳದಲ್ಲಿ ಭದ್ರತೆ ಒದಗಿಸಲಾಗಿದೆ. ಮೊಬೈಲ್ ಹಾಗೂ ಇಂಟರ್ನೆಟ್ ಸೇವೆಗಳನ್ನು ಬಂದ್ ಮಾಡಲಾಗಿದೆ.
ಮೋಸ್ಟ್ ವಾಂಟೆಡ್ ಉಗ್ರ ರಿಯಾಜ್ ಯಾರು?
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಹಳೇ ಮುಖಂಡರಲ್ಲಿ ಒಬ್ಬ ರಿಯಾಜ್ ನಾಯ್ಕೂ.
ರಿಯಾಜ್ ಎ++ (ಉನ್ನತ ದರ್ಜೆ) ಕೆಟೆಗರಿಯ ಉಗ್ರ. ಈತನ ಸುಳಿವು ನೀಡಿದವರಿಗೆ 12 ಲಕ್ಷ ರೂ.ನೀಡುವುದಾಗಿ ಈ ಹಿಂದೆಯೇ ಘೋಷಿಸಲಾಗಿತ್ತು.
ಇದನ್ನೂ ಓದಿ ಗರ್ಭಿಣಿಯಿಂದ 3 ಜಿಲ್ಲೆಗಳಲ್ಲಿ ಆತಂಕ; ಏನೇನೆಲ್ಲ ಆಗಿದೆ ನೋಡಿ ಈಕೆಯಲ್ಲಿ ಸೋಂಕು ದೃಢವಾಗುವ ಮೊದಲು..
ಆವಂತಿಪುರ ಜಿಲ್ಲೆಯ ರಿಯಾಜ್ ನಾಯ್ಕೂ ಅನೇಕ ಪೊಲೀಸರು, ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಪ್ರಮುಖ ಆರೋಪಿ.
2016ರ ಜನವರಿಯಲ್ಲಿ ಮೊದಲ ಬಾರಿಗೆ ಈತ ಮುನ್ನೆಲೆಗೆ ಬಂದಿದ್ದಾನೆ. ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದ ಉಗ್ರ ಶರೀಕ್ ಅಹ್ಮದ್ ಭಟ್ನ ಅಂತ್ಯಕ್ರಿಯೆಯಲ್ಲಿ ಕಾಣಿಸಿಕೊಂಡಿದ್ದ. ಅಹ್ಮದ್ ಮೃತದೇಹವನ್ನು ಹೊತ್ತು ತರುವಾಗ ನಾಯ್ಕೂ ಹಲವು ಬಾರಿ ಗಾಳಿಯಲ್ಲಿ ಗುಂಡು ಹೊಡೆದಿದ್ದ. ಈ ಮೂಲಕ ಮೃತ ಉಗ್ರನಿಗೆ ಗೌರವ ಸಲ್ಲಿಸಿದ್ದ.
2017ರಲ್ಲಿ ರಿಯಾಜ್ ಒಂದು ವಿಡಿಯೋ ಮಾಡಿ ಹರಿಬಿಟ್ಟಿದ್ದ. ಅದರಲ್ಲಿ ಕಾಶ್ಮೀರಿ ಪಂಡಿತರನ್ನು ವಾಪಸ್ ಬರುವಂತೆ ಕೇಳಿಕೊಂಡಿದ್ದ. ಅಲ್ಲದೆ, ಉಗ್ರರು ಕಾಶ್ಮೀರಿ ಪಂಡಿತರಿಗೆ ಶತ್ರುಗಳಲ್ಲ ಎಂದು ಹೇಳಿದ್ದ. (ಏಜೆನ್ಸೀಸ್)
ಇದನ್ನೂ ಓದಿ ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಕುಡುಕರ ಆಸೆ ಈಡೇರಿಸಿ ಜೇಬಿಗೆ ಕತ್ತರಿ ಹಾಕಿದ ಸರ್ಕಾರ