ಶ್ರೀನಗರ: ಇಂದು ಬಾರಾಮುಲ್ಲಾದಲ್ಲಿ ನಡೆದ ಎನ್ಕೌಂಟರ್ನಲ್ಲಿ ಉಗ್ರರ ದಾಳಿಗೆ ಸಿಆರ್ಪಿಎಫ್ನ ಇಬ್ಬರು ಯೋಧರು ಹಾಗೂ ಓರ್ವ ಪೊಲೀಸ್ ಹುತಾತ್ಮರಾಗಿದ್ದಾರೆ.
ಇದರ ಬೆನ್ನಲ್ಲೇ ಭಾರತೀಯ ಯೋಧರು ಲಷ್ಕರ್ ಎ ತೊಯ್ಬಾದ ಉನ್ನತ ಕಮಾಂಡರ್ ಸಜ್ಜಾದ್ನನ್ನು ಕೊಂದು ಹಾಕಿದ್ದಾರೆ. ಈ ಬಗ್ಗೆ ಜಮ್ಮುಕಾಶ್ಮೀರದ ಐಜಿ ವಿಜಯ್ಕುಮಾರ್ ಅವರು ಮಾಹಿತಿ ನೀಡಿದ್ದು, ಲಷ್ಕರ್ ಎ ತೊಯ್ಬಾದ ಸಜ್ಜಾದ್ ಅಲಿಯಾಸ್ ಹೈದರ್ನನ್ನು ಹತ್ಯೆ ಮಾಡಲಾಗಿದೆ. ಇದು ಭದ್ರತಾ ಪಡೆ ಮತ್ತು ಪೊಲೀಸರ ಮಹತ್ವದ ಸಾಧನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದ ಬಿಜೆಪಿ ಮುಖಂಡರಲ್ಲಿ ಹೆಚ್ಚುತ್ತಿದೆ ಭಯ; ಇಂದು ನಾಲ್ವರು ರಾಜೀನಾಮೆ
ಸಜ್ಜದ್ ಹಾಗೂ ಇನ್ನೋರ್ವ ಉಗ್ರನನ್ನು ಹತ್ಯೆ ಮಾಡಲಾಗಿದೆ. ಮೃತರ ಬಳಿ ಇದ್ದ ಒಂದು ಎಕೆ ರೈಫಲ್ ಮತ್ತು ಎರಡು ಪಿಸ್ತೂಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನೋರ್ವ ಉಗ್ರನಿಗಾಗಿ ಹುಡುಕಾಟ ನಡೆದಿದೆ ಎಂದು ಸಿಆರ್ಪಿಎಫ್ ತಿಳಿಸಿದೆ.
ಬಾರಾಮುಲ್ಲಾ ಜಿಲ್ಲೆಯ ಕ್ರೀರಿ ಪ್ರದೇಶದಲ್ಲಿ ಇಂದು ಬೆಳಗ್ಗೆಯಿಂದಲೂ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಎನ್ಕೌಂಟರ್ ನಡೆಯುತ್ತಿದೆ. (ಏಜೆನ್ಸೀಸ್)