ಇಂದೋರ್: ಇಲ್ಲಿನ ಹೋಳ್ಕರ್ ಸ್ಟೇಡಿಯಂನಲ್ಲಿ ನಡೆದ ಭಾರತ vs ಅಫ್ಘಾನಿಸ್ತಾನ್ ನಡುವಿನ ಟಿ20 ಪಂದ್ಯದ ವೇಳೆ ಅಭಿಮಾನಿಯೊಬ್ಬ ಭದ್ರತೆ ಉಲ್ಲಂಘಿಸಿ ವಿರಾಟ್ ಕೊಹ್ಲಿಯ ಪಾದ ಮುಟ್ಟಿ ಬಳಿಕ ತಬ್ಬಿಕೊಂಡಿದ್ದು, ಆತನನ್ನು ಭದ್ರತಾ ಸಿಬ್ಬಂದಿ ಬಂಧಿಸಿದರು.
ಇದನ್ನೂ ಓದಿ: ಎಲ್ಲೆಲ್ಲೂ ಸಂಕ್ರಾಂತಿ ಸಂಭ್ರಮ: ಎಳ್ಳು, ಬೆಲ್ಲ ವಿನಿಮಯ ಜೋರು- ಕಿಚ್ಚು ಹಾಯಲು ಸಜ್ಜು ಜಾನುವಾರು..
ಇಂದೋರ್ನಲ್ಲಿ ಭಾನುವಾರ ನಡೆದ ಎರಡನೇ ಟಿ20 ಪಂದ್ಯದಲ್ಲಿ ಅಫ್ಘಾನಿಸ್ತಾನ ವಿರುದ್ಧ ಭಾರತವು ಆರು ವಿಕೆಟ್ಗಳ ಸುಲಭ ಜಯ ಸಾಧಿಸಿತು. ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡರಲ್ಲೂ ಅಬ್ಬರಿಸಿದ ರೋಹಿತ್ ಶರ್ಮಾ ಬಳಗವು ಸರಣಿಯನ್ನು ತನ್ನದಾಗಿಸಿಕೊಂಡಿತು.
ವಿರಾಟ್ ಕೊಹ್ಲಿ ವರ್ಷದ ಬಳಿಕ ಟಿ20 ಕ್ರಿಕೆಟ್ಗೆ ಈ ಪಂದ್ಯದೊಂದಿಗೆ ಮರಳಿದರು. ಹೀಗಾಗಿಯೇ ಏನೋ ನೆಚ್ಚಿನ ಕ್ರಿಕೆಟಿಗನನ್ನು ಕಂಡು ಅಭಿಮಾನಿಗಳು ಪುಳಕಿತರಾದರು. ಪಂದ್ಯದುದ್ದಕ್ಕೂ ಅಭಿಮಾನಿಗಳು ಕೊಹ್ಲಿ, ಕೊಹ್ಲಿ ಎನ್ನುತ್ತಿದ್ದರು. ಈ ನಡುವೆ ಅಫ್ಘಾನಿಸ್ತಾನದ ಇನ್ನಿಂಗ್ಸ್ ವೇಳೆ ಅಭಿಮಾನಿಯೊಬ್ಬ ಭದ್ರತೆಯನ್ನು ಮೀರಿ ಮೈದಾನಕ್ಕೆ ಹಾರಿಬಂದು ಕೊಹ್ಲಿಯನ್ನು ಭೇಟಿಯಾಗಿದ್ದಾನೆ. ಬೌಂಡರಿ ಲೈನ್ ಬಳಿ ನಿಂತು ಫೀಲ್ಡಿಂಗ್ ಮಾಡುತ್ತಿದ್ದ ಕೊಹ್ಲಿಯ ಪಾದಗಳನ್ನು ಮುಟ್ಟಿ ಅಪ್ಪಿಕೊಂಡು ತನ್ನ ಜೀವನ ಮಹತ್ವದ ಆಸೆಯನ್ನು ತೀರಿಸಿಕೊಂಡಿದ್ದಾನೆ.
ಇದನ್ನು ಕಂಡು ಮಧ್ಯಪ್ರದೇಶ ಪೊಲೀಸರು ಮೈದಾನಕ್ಕೆ ನುಗ್ಗಿದ ಅಭಿಮಾನಿಯನ್ನು ಬಂಧಿಸಿದ್ದಾರೆ. ಬಳಿಕ ಯುವಕನನ್ನು ತುಕೋಗಂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಸದ್ಯ ಯುವಕನ ವಿಚಾರಣೆ ನಡೆಸಲಾಗುತ್ತಿದ್ದು, ಬಳಿಕ ಮುಂದಿನ ಕ್ರಮಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಈ ನಡುವೆ ಎಕ್ಸ್ (ಟ್ವಿಟರ್) ಖಾತೆಯಲ್ಲಿ ಅಭಿಮಾನಿಯೊಬ್ಬ, ಕೊಹ್ಲಿಯನ್ನು ತಬ್ಬಿಕೊಳ್ಳಲು ಭದ್ರತೆ ಉಲ್ಲಂಘಿಸಿದ ವ್ಯಕ್ತಿ ತಾನೇ ಎಂದು ಹೇಳಿಕೊಂಡಿದ್ದಾನೆ. @sigma__male_ ಎಂಬ ಹೆಸರಿನ ಎಕ್ಸ್ ಖಾತೆ ಬಳಸುವ ಆರವ್ ಎಂಬ ವ್ಯಕ್ತಿಯು, ಇದು ತನ್ನ ಜೀವನದ ಅತಿ ದೊಡ್ಡ ಸಾಧನೆ ಎಂದು ಹೇಳಿಕೊಂಡಿದ್ದಾನೆ. ಆದರೆ ಈ ವ್ಯಕ್ತಿಯ ಕುರಿತು ಪೊಲೀಸರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ.
ಇಂದೋರ್ನಲ್ಲಿ ನಡೆದ ಎರಡನೇ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ರೋಹಿತ್ ಶರ್ಮಾ, ಅಫ್ಘನ್ ತಂಡಕ್ಕೆ ಬ್ಯಾಟಿಂಗ್ ಆಹ್ವಾನ ನೀಡಿದರು. ಅದರಂತೆ ಇನ್ನಿಂಗ್ಸ್ ಆರಂಭಿಸಿದ ಪ್ರವಾಸಿ ತಂಡ, ಗುಲ್ಬದೀನ್ ನಯೀಬ್ ಅವರ ಭರ್ಜರಿ ಅರ್ಧಶತಕದ ನೆರವಿನಿಂದ 20 ಓವರ್ಗಳಲ್ಲಿ 172 ರನ್ಗಳಿಗೆ ಆಲೌಟ್ ಆಯಿತು. ಅರ್ಷದೀಪ್ 3, ಅಕ್ಷರ್ ಪಟೇಲ್, ರವಿ ಬಿಷ್ಣೋಯ್ ತಲಾ 2 ವಿಕೆಟ್ ಪಡೆದು ಮಿಂಚಿದರು. 173 ರನ್ಗಳ ಗುರಿ ಬೆನ್ನಟ್ಟಿದ ಭಾರತ, 15.4 ಓವರ್ಗಳಲ್ಲಿ ಭಾರತ ಗೆದ್ದು ಬೀಗಿತು.
ಸಂಕ್ರಾಂತಿ ನಂತರ ಗ್ರಹಗತಿ ಪ್ರಭಾವ ಹೇಗಿದೆ? ರಾಜಗುರು ಬಿ.ಎಸ್.ದ್ವಾರಕಾನಾಥ್ ಭವಿಷ್ಯ