More

    ಕೂಲಿ ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೊರಟವರ ಪ್ರಾಣ ಹೊತ್ತೊಯ್ದ ಜವರಾಯ!

    ಗದಗ: ಲಕ್ಷ್ಮೇಶ್ವರ ತಾಲೂಕಿನ ಗುಂಜಳ ರಸ್ತೆಯಲ್ಲಿ ಗುರುವಾರ ಟ್ರ್ಯಾಕ್ಟರ್​ ಪಲ್ಟಿಯಾಗಿ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾಗಿದ್ದು, 7 ಜನರು ಗಾಯಗೊಂಡಿದ್ದಾರೆ.

    ಕೂಲಿ ಕೆಲಸ ಮುಗಿಸಿಕೊಂಡು ಟ್ರ್ಯಾಕ್ಟರ್​ನಲ್ಲಿ ವಾಪಸ್​ ಮನಗೆ ಬರುವಾಗ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಈ ಅವಘಡದಲ್ಲಿ ಲಕ್ಷ್ಮೇಶ್ವರ ನಿವಾಸಿಗಳಾದ ಸರೋಜವ್ವಾ ಹಿತ್ತಲಮನಿ(40) ಮತ್ತು ಸೋಮವ್ವಾ ಅಡುಗೆಮನಿ(48) ಮೃತಪಟ್ಟಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

    ಅಪಘಾತದಲ್ಲಿ ಗಾಯಾಗೊಂಡವರನ್ನು ಲಕ್ಷ್ಮೇಶ್ವರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದು, ಬಡ ಜೀವಗಳು ಉಳಿಯಲೆಂದು ಕಣ್ಣೀರಿಡುತ್ತಿದ್ದ ದೃಶ್ಯ ಮನಕಲಕುವಂತಿತ್ತು. ಲಕ್ಷ್ಮೇಶ್ವರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾಜ್ಯದಲ್ಲಿ ಈ ಭಾರಿ 110 ಜಿಲ್ಲಾ ಪಂಚಾಯಿತಿ ಕ್ಷೇತ್ರ ಹೆಚ್ಚಳ, 600 ತಾಪಂ ಕ್ಷೇತ್ರಗಳು ರದ್ದು!

    ಖಾಸಗಿ ಶಾಲೆ ಮಾಲೀಕ ಆತ್ಮಹತ್ಯೆ! ಸಾವಿಗೂ ಮುನ್ನ ಬರೆದ ಡೆತ್​ನೋಟ್​ನಲ್ಲಿದೆ ನೋವು

    ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts