ಗದಗ: ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಕಾಲುವೆಗೆ ಬಿದ್ದ ಪರಿಣಾಮವಾಗಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಬೆನಕನಕೊಪ್ಪ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದೆ.
ಬೆನಕನಕೊಪ್ಪ ಗ್ರಾಮದ ಹೊರವಲಯದಲ್ಲಿ ಸಂಭವಿಸಿದ ಅಪಘಾತದಲ್ಲಿ ಚಿಕ್ಕನರಗುಂದ ಗ್ರಾಮದ ಶಿವಾನಂದ ಪಂಚಪ್ಪ ತಳವಾರ (22) ಸಾವಿಗೀಡಾಗಿದ್ದಾನೆ.
ಚಿಕ್ಕನರಗುಂದ ಗ್ರಾಮದಿಂದ ಜಮೀನು ಕೆಲಸಕ್ಕೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಕಾಲುವೆಯಲ್ಲಿ ಟ್ರ್ಯಾಕ್ಟರ್ ಪಲ್ಟಿಯಾದ ಪರಿಣಾಮ ಚಾಲಕ ಶಿವಾನಂದ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ದಿಯ ಶೀರ್ಷಿಕೆ ತಿರುಚಿದ ಕಿಡಿಗೇಡಿಗಳ ವಿರುದ್ಧ ಪೊಲೀಸರಿಗೆ ದೂರು