More

    ಇಬ್ಬರು ಮಕ್ಕಳ ಕಣ್ಣೆದುರೇ ಸಾವಿಗೀಡಾದ ತಂದೆ; ಮಕ್ಕಳಿಬ್ಬರಿಗೂ ಗಾಯ..

    ಯಾದಗಿರಿ: ವ್ಯಕ್ತಿಯೊಬ್ಬರು ಮಕ್ಕಳಿಬ್ಬರ ಕಣ್ಣೆದುರೇ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಯಾದಗಿರಿ-ಷಹಾಪುರ ಮಾರ್ಗದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಮಕ್ಕಳಿಬ್ಬರಿಗೂ ಗಾಯಗಳಾಗಿವೆ.

    ಯಾದಗಿರಿ ಜಿಲ್ಲೆಯ ಷಹಾಪುರದ ಸೋಮಣ್ಣ ಹಿಂದಿನಮನಿ (45) ಸಾವಿಗೀಡಾದ ವ್ಯಕ್ತಿ. ಇವರ ಜತೆಗಿದ್ದ ಮಕ್ಕಳಾದ ಮಹೇಶ (10) ಹಾಗೂ ಹನುಮಂತ (12) ಇಬ್ಬರಿಗೂ ಗಂಭೀರ ಗಾಯಗಳಾಗಿದ್ದು, ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

    ಷಹಾಪುರ ತಾಲೂಕಿನ ಸಗರ ಗ್ರಾಮದ ನಿವಾಸಿ ಸೋಮಣ್ಣ ಬೈಕ್​ನಲ್ಲಿ ಮಕ್ಕಳಿಬ್ಬರ ಜತೆಗೆ ಹೋಗುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ರ್ಯಾಕ್ಟರ್​ನ ಟಯರ್ ಸ್ಫೋಟಗೊಂಡು ನಿಯಂತ್ರಣ ತಪ್ಪಿದ್ದರಿಂದ ಅದು ಬೈಕ್​ಗೆ ಡಿಕ್ಕಿ ಹೊಡೆದಿದೆ. ಅಪಘಾತ ಆಗುತ್ತಿದ್ದಂತೆ ಟ್ರ್ಯಾಕ್ಟರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ವಡಗೇರಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    5 ಮದ್ವೆ, 3 ಡೈವೋರ್ಸ್, ಸದ್ಯ ಇಬ್ರು ಹೆಂಡ್ತಿ; ಪತ್ನಿ ಬೇಗ ಮನೆಗೆ ಬರಲಿ ಎಂದೇ ಫ್ಲೈಓವರ್!; ಏನಿದು, ಯಾರ ಕಥೆ?

    ಬೇಸಿಗೆಯಲ್ಲಿ ವಾಹನದ ಪೆಟ್ರೋಲ್ ಟ್ಯಾಂಕ್ ಫುಲ್ ಮಾಡಿದ್ರೆ ಬ್ಲಾಸ್ಟ್​ ಆಗುತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts