ರಾಣೆಬೆನ್ನೂರ: ಟ್ರಾೃಕ್ಟರ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಕಾಕೋಳ ಗ್ರಾಮದ ಬಳಿ ಸೋಮವಾರ ನಡೆದಿದೆ.
ತಾಲೂಕಿನ ಕಜ್ಜರಿ ಗ್ರಾಮದ ದಾದಾಪೀರ ಹುಸೇನಸಾಬ ಮೇಡ್ಲೇರಿ (34) ಮೃತ ವ್ಯಕ್ತಿ.
ಈತ ಕಾಕೋಳ ಗ್ರಾಮದ ಕಡೆಗೆ ಬರುತ್ತಿದ್ದ ಸಮಯದಲ್ಲಿ ಟ್ರಾೃಕ್ಟರ್ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ದಾದಾಪೀರ ಆಸ್ಪತ್ರೆಗೆ ಸಾಗಿಸುವ ಸಮಯದಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.