ಅವ್ಯವಸ್ಥೆಯಿಂದ ಸಂಚಾರಕ್ಕೆ ಸಂಕಷ್ಟ

blank

ಕುಂದಾಪುರ: ಜಿಲ್ಲೆಯ ಅತಿ ಉದ್ದದ ಸೇತುವೆಗಳಲ್ಲಿ ಒಂದಾಗಿರುವ ಕುಂದಾಪುರ ಸಮೀಪದ ಅರಾಟೆ ಸೇತುವೆ ದುರಸ್ತಿ ಮಾಡುವ ಉದ್ದೇಶದಿಂದ ಜಿಲ್ಲಾಡಳಿತ ಎರಡು ತಿಂಗಳಿನಿಂದ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಿದ್ದು, ಹೊಸ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿಕೊಟ್ಟಿದೆ.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಸಾಗುವ ವಾಹನಗಳಿಗೆ ಕನ್ನಡಕುದ್ರು ಎಂಬಲ್ಲಿ ಡೈವರ್ಶನ್ ಕೊಡಲಾಗಿದ್ದು, ರಾತ್ರಿ ವೇಳೆ ವಾಹನ ಚಾಲಕರಿಗೆ ಡೈವರ್ಶನ್ ಇರುವುದು ಮತ್ತು ರಸ್ತೆ ಮುಚ್ಚಿರುವುದು ಗೊತ್ತಾಗಲು ಡಿವೈಡರ್‌ನ ಬಳಿ ಇಂಡಿಕೇಟರ್ ಅಳವಡಿಸಲಾಗಿದೆ. ಆದರೆ ಕೆಲವು ದಿನಗಳಿಂದ ಇಂಡಿಕೇಟರ್ ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದ ರಾತ್ರಿ ಸಂಚರಿಸುವ ವಾಹನ ಸವಾರರಿಗೆ ಕಂಟಕವಾಗುವ ಸಾಧ್ಯತೆ ಇದೆ.

ಇಂಡಿಕೇಟರ್ ಕೆಟ್ಟುಹೋಗಿದ್ದರೂ ಇದುವರೆಗೆ ದುರಸ್ತಿಪಡಿಸಿಲ್ಲ. ಕನ್ನಡಕುದ್ರು ಮತ್ತು ಅರಾಟೆ ಬಳಿ ನಿರ್ಮಿಸಲಾಗಿರುವ ಡೈವರ್ಶನ್ ಬಳಿ ಎರಡು ಪ್ರತ್ಯೇಕ ಅಪಘಾತ ಕೂಡ ನಡೆದಿದ್ದು, ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಇಷ್ಟಾದರೂ ವಾಹನ ಚಾಲಕರ ಮತ್ತು ಪ್ರಯಾಣಿಕರ ಸುರಕ್ಷತೆ ಬಗ್ಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಸಂಬಂಧಪಟ್ಟ ಗುತ್ತಿಗೆದಾರರು ನಿರ್ಲಕ್ಷೃ ವಹಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಮೃತೇಶ್ವರಿ ದೇಗುಲದಲ್ಲಿ ಜಾತ್ರಾ ಸಂಭ್ರಮ

ಶಿಕ್ಷಣದಿಂದ ಬಹುಮುಖ ವ್ಯಕ್ತಿತ್ವ ವಿಕಸನ

 

Share This Article

ಕೂಡಲೇ ಇವುಗಳನ್ನು ತಿನ್ನುವುದನ್ನು ನಿಲ್ಲಿಸದಿದ್ರೆ ನಿಮ್ಮ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗೋದು ಗ್ಯಾರಂಟಿ! Sperm Count

Sperm Count : ಇತ್ತೀಚಿನ ದಿನಗಳಲ್ಲಿ ಪುರುಷರಲ್ಲಿ ವೀರ್ಯಾಣುಗಳ ಸಂಖ್ಯೆ ಕಡಿಮೆಯಾಗುವುದು ಸಾಮಾನ್ಯ ಸಮಸ್ಯೆಯಾಗಿದೆ. ಇದು…

ಕ್ಯಾರೆಟ್​ ಬರ್ಫಿಗೆ ಫಿದಾ ಆಗದವರೇ ಇಲ್ಲ; ಮನೆಯಲ್ಲೇ ಮಾಡಲು ಇಲ್ಲಿದೆ ಸಿಂಪಲ್​ ವಿಧಾನ | Recipe

ಕ್ಯಾರೆಟ್​​ ಹಲ್ವಾ ಎಲ್ಲರಿಗೂ ಇಷ್ಟ, ಅದಕ್ಕಾಗಿಯೇ ಕ್ಯಾರೆಟ್ ಹಲ್ವಾವನ್ನು ಎಲ್ಲಾ ಋತುವಿನಲ್ಲೂ ಹಲವಾರು ಬಾರಿ ತಯಾರಿಸಿ…

ಆರೋಗ್ಯಕರ ಹೃದಯಕ್ಕೆ ಮೊಟ್ಟೆ ಎಷ್ಟು ಸಹಕಾರಿ ಗೊತ್ತಾ?; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಮೊಟ್ಟೆಗಳು ಪ್ರೋಟೀನ್‌ನ ಉತ್ತಮ ಮೂಲವಾಗಿದ್ದು, ವಿಟಮಿನ್ ಬಿ, ಫೋಲೇಟ್, ಕೊಬ್ಬಿನಲ್ಲಿ ಕರಗುವ ಜೀವಸತ್ವಗಳು (ಎ, ಡಿ,…