More

    ಹಾಳಾದ ರಸ್ತೆಯಲ್ಲಿ ಸಂಚಾರ ದುಸ್ತರ

    ರಾಣೆಬೆನ್ನೂರ: ಇಲ್ಲಿಯ ಕನಕದಾಸ ನಗರದ ರಸ್ತೆಯಲ್ಲಿ ಡಾಂಬರು ಕಿತ್ತಿದ್ದು, ತಗ್ಗು ಗುಂಡಿ ಬಿದ್ದು ಹಾಳಾಗಿದೆ. ವಾಹನ ಸವಾರರು ಜೀವ ಕೈಯಲ್ಲಿ ಹಿಡಿದುಕೊಂಡು ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ಚರಂಡಿಗಳು ಅಲ್ಲಲ್ಲಿ ಒಡೆದು ಹೋಗಿದ್ದು, ಸ್ಥಳೀಯರಿಗೆ ತೀವ್ರ ತೊಂದರೆ ಉಂಟಾಗಿದೆ.

    ನಗರಸಭೆ ವ್ಯಾಪ್ತಿಯ ರಸ್ತೆ ಹಾಗೂ ಚರಂಡಿಗಳು ಹಾಳಾಗಿವೆ ಹೋಗಿವೆ. ಮಳೆಗಾಲದ ನೀರಿನ ರಭಸಕ್ಕೆ ಡಾಂಬರೀಕರಣ ಕಿತ್ತು ಹೋಗಿದೆ. ಚರಂಡಿ ಒಡೆದು ಹೋಗಿದ್ದರಿಂದ ನೀರೆಲ್ಲ ಈ ರಸ್ತೆಯಲ್ಲಿನ ಗುಂಡಿಯಲ್ಲಿ ತುಂಬುತ್ತಿರುವುದರಿಂದ ವಾಹನ ಸವಾರರಿಗೆ, ದಾರಿ ಹೋಕರಿಗೆ ತೊಂದರೆಯಾಗುತ್ತಿದೆ.

    ಕನಕದಾಸ ನಗರದ ಪ್ರಮುಖ ರಸ್ತೆ ಇದಾಗಿದೆ. ರಸ್ತೆ ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿ ಕಂಡಿಲ್ಲ.ರಸ್ತೆಗಳ ಸುಧಾರಣೆಗೆ ನಗರಸಭೆ ಲಕ್ಷಾಂತರ ರೂ. ಖರ್ಚು ಮಾಡುತ್ತಿದ್ದರೂ ಕನಕದಾಸ ನಗರದಲ್ಲಿ ಮಾತ್ರ ಅಭಿವೃದ್ಧಿ ಮರಿಚಿಕೆಯಾಗಿದೆ.

    ಇಲ್ಲಿಯ ಸಮಸ್ಯೆಗಳ ಕುರಿತು ನಗರಸಭೆ ಅಕಾರಿಗಳು, ಜನಪ್ರತಿನಿಗಳು ಹಾಗೂ ವಾರ್ಡ್ ಸದಸ್ಯರ ಗಮನಕ್ಕೆ ತಂದರೂ ಯಾವುದೆ ಪ್ರಯೋಜನವಾಗಿಲ್ಲ. ಆದ್ದರಿಂದ ಸಂಬಂಧಪಟ್ಟ ಅಕಾರಿಗಳು ಮುಂದಿನ ದಿನದಲ್ಲಾದರೂ ಸಮಸ್ಯೆ ಬಗೆಹರಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

    ರಸ್ತೆಯಲ್ಲಿನ ಡಾಂಬರ್ ಕಿತ್ತು ಹೋಗಿದೆ. ದುರಸ್ತಿ ಮಾಡುವಂತೆ ಸಂಬಂಧಪಟ್ಟ ಅಕಾರಿಗಳಿಗೆ ಹಲವು ಬಾರಿ ಮನವಿ ನೀಡಲಾಗಿದೆ. ಈವರೆಗೆ ರಸ್ತೆ ಅಭಿವೃದ್ಧಿಗೆ ಮುಂದಾಗಿಲ್ಲ. ದಿನಕ್ಕೆ ಒಬ್ಬರಾದರೂ ಬಿದ್ದು ಗಾಯ ಮಾಡಿಕೊಳ್ಳುವುದು ತಪ್ಪಿಲ್ಲ.
    I ಭರಮಗೌಡ ಭರಮಗೌಡ್ರ, ಸ್ಥಳೀಯ ನಿವಾಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts