ಮಂಡ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ: ಸ್ಥಳದಲ್ಲೇ ರೈತ ಸಾವು, ಬಾಲಕನ ಸ್ಥಿತಿ ಗಂಭೀರ

ಮಂಡ್ಯ: ತಾಲೂಕಿನ ಚಿಕ್ಕಮಂಡ್ಯ ಗ್ರಾಮದಲ್ಲಿ ಭಾನುವಾರ ಆಯೋಜಿಸಿದ್ದ ಎತ್ತಿನಗಾಡಿ ಓಡಿಸುವ ಸ್ಪರ್ಧೆಯಲ್ಲಿ ದುರಂತ ಸಂಭವಿಸಿದೆ. ಸ್ವರ್ಧೆ ವೇಳೆ ಪ್ರೇಕ್ಷಕರ ಕಡೆಗೆ ಎತ್ತಿನಗಾಡಿ ನುಗ್ಗಿದ ಪರಿಣಾಮ ರೈತರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. 10 ವರ್ಷದ ಬಾಲಕನ ಸ್ಥಿತಿ ಗಂಭೀರವಾಗಿದೆ. ಕೀಲಾರ ಗ್ರಾಮದ ಜಾನಪದ ಕಲಾವಿದ, ರೈತ ಸಂಘದ ಕಾರ್ಯಕರ್ತ ನಾಗರಾಜು(55) ಮೃತರು. ಹುಲಿವಾನ ಗ್ರಾಮದ ಋತ್ವಿಕ್​(10) ತೀವ್ರವಾಗಿ ಗಾಯಗೊಂಡಿದ್ದಾನೆ. ಈತನ ಎದೆಯ ಭಾಗದಲ್ಲಿ ಗಂಭೀರ ಗಾಯಗಳಾಗಿದ್ದು, ನಗರದ ಮಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಹಳ್ಳಿಕೇಶ್ವರ ಬೋರೇಶ್ವರ ಹಾಗೂ ರೈತ ಮಿತ್ರ … Continue reading ಮಂಡ್ಯದಲ್ಲಿ ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ: ಸ್ಥಳದಲ್ಲೇ ರೈತ ಸಾವು, ಬಾಲಕನ ಸ್ಥಿತಿ ಗಂಭೀರ