More

    ರೋಹಿಣಿ ಸಿಂಧೂರಿ-ಶಿಲ್ಪಾ ನಾಗ್ ಇಬ್ಬರೂ ಎತ್ತಂಗಡಿ; ಮೈಸೂರು ಡಿಸಿ ಆಗಿ ಡಾ. ಬಗಾದಿ ಗೌತಮ್​

    ಮೈಸೂರು: ಪರಸ್ಪರ ಕೆಸರೆರಚಾಟದ ಮೂಲಕ ರಾಜ್ಯದ ಗಮನ ಸೆಳೆದ ಇಬ್ಬರೂ ಅಧಿಕಾರಿಗಳನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಆ ಮೂಲಕ ಇಬ್ಬರ ನಡುವಿನ ಸಂಘರ್ಷವನ್ನು ಶಮನಗೊಳಿಸುವ ಪ್ರಯತ್ನ ಮಾಡಿದೆ. ಕಳೆದ ಕೆಲವು ದಿನಗಳಿಂದ ಸಂಘರ್ಷದಲ್ಲಿದ್ದ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹಾಗೂ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

    ರೋಹಿಣಿ ಸಿಂಧೂರಿ ಅವರನ್ನು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾಗಿ ಹಾಗೂ ಶಿಲ್ಪಾ ನಾಗ್ ಅವರನ್ನು ಆರ್​​ಡಿಪಿಆರ್ ನಿರ್ದೇಶಕರಾಗಿ ವರ್ಗಾವಣೆ ಮಾಡುವ ಮೂಲಕ ಸರ್ಕಾರ ಒಟ್ಟು ಆರು ಐಎಎಸ್​ ಅಧಿಕಾರಿಗಳನ್ನು ಟ್ರಾನ್ಸ್​ಫರ್ ಮಾಡಿದೆ.

    ಇನ್ನು ಮೈಸೂರಿನ ನೂತನ ಜಿಲ್ಲಾಧಿಕಾರಿಯಾಗಿ ಡಾ. ಬಗಾದಿ ಗೌತಮ್, ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮೀಕಾಂತ್ ರೆಡ್ಡಿ ವರ್ಗಾವಣೆಗೊಂಡಿದ್ದಾರೆ. ಡಾ. ಬಗಾದಿ ಗೌತಮ್ ಇದಕ್ಕೂ ಮೊದಲು ವಾಣಿಜ್ಯ ತೆರಿಗೆ ಹೆಚ್ಚುವರಿ ಆಯುಕ್ತರಾಗಿ ಹಾಗೂ ಲಕ್ಷ್ಮೀಕಾಂತ್ ರೆಡ್ಡಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು.

    ಊಟ ಕೇಳಿದ 82 ವರ್ಷದ ತಾಯಿಗೆ ಹೊಡೆದು ಮನೆಯಿಂದ ಹೊರಹಾಕಿದ ಮಗ!

    ಹೂತಿಟ್ಟ 20 ದಿನಗಳ ಬಳಿಕ ಶವ ಹೊರಕ್ಕೆ ತೆಗೆಸಿದ ಪೊಲೀಸರು!; ಅದು ಬರೀ ಸಾವಲ್ಲ, ಕೊಲೆ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts