ಬೆಂಗಳೂರು: ಇದಕ್ಕೆ ಕಾರಣ ಗ್ರಹಚಾರವೋ, ಬಿಬಿಎಂಪಿಯೋ ಎಂದು ಸ್ಪಷ್ಟವಾಗಿ ಹೇಳುವುದು ಕಷ್ಟ. ಆದರೆ ಈ ಘಟನೆ ವ್ಯಕ್ತಿಯೊಬ್ಬ ಜೀವನ್ಮರಣ ಹೋರಾಟ ನಡೆಸುವಂತೆ ಮಾಡಿರುವುದಂತೂ ನಿಜ. ಬೆಂಗಳೂರಿನ ಜೆ.ಪಿ.ನಗರದಲ್ಲಿ ಈ ಪ ನಡೆದಿದೆ.
ದ್ವಿಚಕ್ರ ವಾಹನ ಸವಾರ ಶ್ರೀಧರ್ ಈ ಪ್ರಕರಣದಲ್ಲಿ ಗಾಯಗೊಂಡವರು. ಇವರು ಇಂದು ಬೆಳಗ್ಗೆ ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಜೆ.ಪಿ.ನಗರ 21ನೇ ಮುಖ್ಯರಸ್ತೆಯಲ್ಲಿ ಮರದ ಕೊಂಬೆ ವಾಹನದ ಮೇಲೇ ಬಿದ್ದಿದೆ. ಪರಿಣಾಮವಾಗಿ ಶ್ರೀಧರ್ ಕಾಲು ಮುರಿದು ಹೋಗಿದ್ದು, ತಲೆಗೂ ಗಂಭೀರ ಗಾಯವಾಗಿದೆ. ಬೈಕ್ ಕೂಡ ಜಖಂಗೊಂಡಿದೆ.
ಇದನ್ನೂ ಓದಿ: ಪೂಜೆಯಿಂದಾಗಿ ಪ್ರಾಣಾಪಾಯದಿಂದ ಪಾರಾದ ಉದ್ಯಮಿ!; ಆಗಿದ್ದೇನು?
ಗಾಯಾಳುವನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳುವಿನ ಸಂಬಂಧಿ ಬಿಬಿಎಂಪಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಮರಗಳ ನಿರ್ವಹಣೆಯನ್ನು ಪಾಲಿಕೆ ಸರಿಯಾಗಿ ನಿಭಾಯಿಸದ್ದರಿಂದ ಈ ಅವಘಡ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಅವರು, ನೆರವಾಗುವಂತೆ ಸರ್ಕಾರದ ಗಮನ ಸೆಳೆದಿದ್ದಾರೆ.
This is on behalf of my cousin who is been victimised for the poor management of trees in Bangalore from BBMP. Today morning a tree branch fell down on him while going to office around 10am near JP nagar. The fracture is worst. Request for help @CMofKarnataka @BBMPCOMM @BBMPAdmn pic.twitter.com/NAGGIDkF7j
— swaroop (@swaroop_sh) May 24, 2023
22 ವರ್ಷ ತನ್ನೊಳಗಿದ್ದ ಹೃದಯವನ್ನು 16 ವರ್ಷಗಳ ಬಳಿಕ ಮ್ಯೂಸಿಯಮ್ನಲ್ಲಿ ಕಣ್ಣೆದುರೇ ಕಂಡಳು!