ಯಲ್ಲಾಪುರ:ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು, ಇಬ್ಬರು ಗಾಯಗೊಂಡ ಘಟನೆ ಪಟ್ಟಣದ ಹಳಿಯಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 63 ರ ಮೇಲೆ ಶುಕ್ರವಾರ ನಡೆದಿದೆ.
ಕಾರಿನಲ್ಲಿದ್ದ ಉಮ್ಮಚಗಿಯ ಸುಬ್ರಹ್ಮಣ್ಯ.ಆರ್. ಹೆಗಡೆ ಹಾಗೂ ಪರಶುರಾಮ ವಾಲೇಕರ್ ಗಾಯಗೊಂಡವರು. ಇವರು ಕಾರಿನಲ್ಲಿ ಹಳಿಯಾಳ ಕಡೆಗೆ ಹೋಗುವಾಗ ಏಕಾಏಕಿ ಮರವೊಂದು ಕಾರಿನ ಮೇಲೆ ಬಿದ್ದು, ಕಾರು ನುಜ್ಜುಗುಜ್ಜಾಗಿದೆ.
ಇದನ್ನೂ ಓದಿ: ಟ್ಯಾಂಕರ್ ಬಡಿದು ನಿವೃತ್ತ ಶಿಕ್ಷಕ ನಿಧನ
ಕಾರಿನಲ್ಲಿದ್ದ ಇಬ್ಬರೂ ಗಾಯಗೊಂಡಿದ್ದು, ಯಲ್ಲಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಗೆ ಕರೆದೊಯ್ಯಲಾಗಿದೆ. ಈ ಕುರಿತು ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.