ಶಿವಮೊಗ್ಗ: ರಾಜ್ಯದ ಹಲವೆಡೆ ಭಾರಿ ಗಾಳಿ ಮಳೆ ಬೀಸುತ್ತಿದ್ದು, ಮಳೆ ಸಂಬಂಧಿತ ಅವಾಂತರಗಳು ಕೇಳಿಬರುತ್ತಿವೆ. ಈ ನಡುವೆ ಚಲಿಸುತ್ತಿದ್ದ ಬೈಕ್ ಮೇಲೆಯೇ ಮರವೊಂದು ಬಿದ್ದಿದ್ದಲ್ಲದೆ, ನಡೆದುಕೊಂಡು ಹೋಗುತ್ತಿದ್ದವರೂ ಆ ಮರದಡಿಗೆ ಸಿಲುಕಿದ ಪ್ರಕರಣವೂ ವರದಿಯಾಗಿದೆ.
ಶಿವಮೊಗ್ಗ ಜಿಲ್ಲೆ ಹೊಸನಗರದ ಕೊಡಚಾದ್ರಿ ಕಾಲೇಜು ಎದುರು ಇಂದು ಈ ಅವಘಡ ಸಂಭವಿಸಿದೆ. ಬೈಕ್ವೊಂದು ಸಾಗುತ್ತಿದ್ದಾಗ ಬೀಸುತ್ತಿದ್ದ ಭಾರಿ ಗಾಳಿ ಮಳೆಗೆ ಉರುಳಿದ ಮರ ಅಪಘಾತಕ್ಕೆ ಕಾರಣವಾಗಿದೆ. ಬೈಕ್ ಸವಾರ, ಮಾವಿನಕೊಪ್ಪ ಬಡಾವಣೆಯ ಸಾದಿಕ್ ಎಂಬವರು ಬೈಕ್ ಸಮೇತ ಮರದಡಿಗೆ ಸಿಲುಕಿ ಗಂಭೀರ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಸಾದಿಕ್ ಮಾತ್ರವಲ್ಲದೆ ಮತ್ತೊಬ್ಬ ಬೈಕ್ ಸವಾರ ಪ್ರತೀಕ್ ಹಾಗೂ ನಡೆದುಕೊಂಡು ಹೋಗುತ್ತಿದ್ದ ಋತ್ವಿಕ್ ಎಂಬವರೂ ಮರದಡಿಗೆ ಸಿಲುಕಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದರೂ ಸಣ್ಣಪುಟ್ಟ ಗಾಯಗಳಾಗಿವೆ. ಈ ಬೃಹತ್ ಮರ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಹೊಸನಗರ ಹಾಗೂ ಶಿವಮೊಗ್ಗ ನಡುವಿನ ರಸ್ತೆ ಸಂಪರ್ಕ ಕೆಲಕಾಲ ಸ್ಥಗಿತಗೊಂಡಿತ್ತು. ಬಳಿಕ ಮರ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.
ಬೇಡ ವರಿ, ಕಟ್ಟಿಹಾಕೋಣ ಮಹಾಮಾರಿ: ರಾಜ್ಯದ ಜನತೆಗೆ ಪಂಚ ಸಚಿವರ ಅಭಯ, ಸಂಭಾವ್ಯ ಮೂರನೇ ಅಲೆ ಬಗ್ಗೆ ಬೇಡ ಭಯ..
ಸಾಯುವವನು ಎಲ್ಲಿ ಬೇಕಾದ್ರೂ ಸಾಯಲಿ, ನಾನು ಇಲ್ಲಿ ಕೋವಿಡ್ ಸೆಂಟರ್ ತೆರೆಯಲ್ಲ: ಬಿಜೆಪಿ ಶಾಸಕರ ಖಡಾಖಂಡಿತ ಮಾತು