ಚಲಿಸುತ್ತಿದ್ದ ಕಾರಿನ ಮೇಲೇ ಬಿದ್ದ ಮರ, ತಂದೆ-ಮಗ ಸ್ಥಳದಲ್ಲೇ ಸಾವು..

ಚಾಮರಾಜನಗರ: ಚಲಿಸುತ್ತಿದ್ದ ಕಾರಿನ ಮೇಲೆ ಮರವೊಂದು ಉರುಳಿಬಿದ್ದ ಪರಿಣಾಮವಾಗಿ ಕಾರಿನಲ್ಲಿದ್ದ ತಂದೆ ಮಗ ಇಬ್ಬರೂ ಸ್ಥಳದಲ್ಲೇ ದಾರುಣ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಸಮೀಪ ಹೆಗ್ಗವಾಡಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಹೊನ್ನೂರು ಗ್ರಾಮದ ಹೆಚ್.ಬಿ.ರಾಜು (49) ಹಾಗೂ ಇವರ ಪುತ್ರ ಶರತ್ (22) ಸಾವಿಗೀಡಾದವರು. ಯಳಂದೂರಿನಲ್ಲಿ ಹೋಲ್‌ಸೇಲ್ ಅಂಗಡಿ ನಡೆಸುತ್ತಿದ್ದ ರಾಜಣ್ಣ ತಮ್ಮ ಪುತ್ರನೊಂದಿಗೆ ಕಾರಿನಲ್ಲಿ ಕುದೇರು ರಸ್ತೆಯಲ್ಲಿ ಸಾಗುತ್ತಿದ್ದಾಗ ಈ ಅವಘಡ ಸಂಭವಿಸಿದೆ. ಇವರು ಮಾರುತಿ ಒಮ್ನಿಯಲ್ಲಿ ಪ್ರಯಾಣಿಸುತ್ತಿದ್ದು, ಆಲದ ಮರ ಬಿದ್ದ … Continue reading ಚಲಿಸುತ್ತಿದ್ದ ಕಾರಿನ ಮೇಲೇ ಬಿದ್ದ ಮರ, ತಂದೆ-ಮಗ ಸ್ಥಳದಲ್ಲೇ ಸಾವು..