ಬುಡಕಟ್ಟು ಜನಾಂಗ ಆರ್ಥಿಕವಾಗಿ ಸದೃಢವಾಗಲಿ

blank

ಬೆಳಗಾವಿ: ಬುಡಕಟ್ಟು ಜನಾಂಗದವರನ್ನು ಮುಖ್ಯ ವಾಹಿನಿಗೆ ತರಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದೆ ಬರಬೇಕು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ನಗರದ ಕುಮಾರ ರಂಗ ಮಂದಿರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ತಿ ಅಲಾ ಭಗವಾನ ಬಿರ್ಸಾ ಮುಂದಾರಿ ಅವರ 150ನೇ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಿರ್ಸಾ ಮುಂಡಾರಿ ಅವರನ್ನು ಬುಡಕಟ್ಟು ಜನಾಂಗದವರು ಭಗವಾನ್ ಎಂದು ಪೂಜಿಸುತ್ತಾರೆ. ಸಮಾಜದ ಮುಖ್ಯ ವಾಹಿನಿಗಳಿಗೆ ಯಾವ ಜನಾಂಗದವರು ಬಂದಿಲ್ಲ ಅಂತ ಜನಾಂಗದವರಿಗೆ ಮುಖ್ಯವಾಹಿನಿಗೆ ಬರುವಂತೆ 17 ಇಲಾಖೆಗಳಿಂದ 15 ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಇದು ಜನರು ಒಳ್ಳೇ ಜೀವನ ನಡೆಸಲು ಸಹಾಯವಾಗುತ್ತದೆ ಎಂದು ತಿಳಿಸಿದರು.

ಜಿಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಮಾತನಾಡಿ, ಬುಡಕಟ್ಟು ಸಮುದಾಯದ ನಾಯಕ, ಸ್ವಾತಂತ್ರ್ಯ ಹೋರಾಟಗಾರ, ಭಗವಾನ್ ಬಿರ್ಸಾ ಮುಂಡಾ ಅವರ 150ನೇ ವರ್ಷದ ಜನ್ಮದಿನಾಚರಣೆಯನ್ನು ಜನಜಾತಿಯ ಗೌರವ ದಿನವನ್ನಾಗಿ ದೇಶಾದ್ಯಂತ ಅತ್ಯಂತ ಸಂಭ್ರಮದಿಂದ ಆಚರಣೆ ಮಾಡಲಾಗುತ್ತಿದೆ. ಭಾರತ ಬುಡಕಟ್ಟು ಸಮುದಾಯದ ಶ್ರೀಮಂತ ಸಾಂಸ್ಕೃತಿಕ ಪರಂಪರೆ, ಸಾಂಪ್ರದಾಯಿಕ ಕಲಾಕೃತಿಗಳು ಕರಕುಶಲ ಸಂಪನ್ಮೂಲಗಳನ್ನು ಇವತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರ್ತಿಸಿ ಗೌರವಿಸಲಾಗುತ್ತಿದೆ ಎಂದರು. ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ ಮಾತನಾಡಿದರು.ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಅಧಿಕಾರಿ ಬಸವರಾಜ ಕುರಿಹೊಳಿ, ಕೃಷಿ ಇಲಾಖೆ ಉಪ ನಿರ್ದೇಶಕ ಸಲೀಂ ಅಹ್ಮದ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಗಿರಿಧರ ಜಾಧವ, ಜಿಪಂ ಯೋಜನಾ ನಿರ್ದೇಶಕ ಬಂಗಾರಪ್ಪನವರ, ತಾಲೂಕು ಆರೋಗ್ಯ ಅಧಿಕಾರಿ ರಾಜಶ್ರೀ ಪಾಟೀಲ, ಕರ್ನಾಟಕ ಆದಿ ಜಾಂಭವ ಅಭಿವೃದ್ಧಿ ನಿಗಮ ಜಿಲ್ಲಾ ವ್ಯವಸ್ಥಾಪಕ ಬಸವರಾಜ ಚನ್ನನವರ ಇತರರಿದ್ದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…