ಮಂಗಳೂರು: 2010ರ ಬಜ್ಪೆ ವಿಮಾನ ದುರಂತದಲ್ಲಿ ಮಡಿದ ಪ್ರಯಾಣಿಕರು ಹಾಗೂ ಸಿಬ್ಬಂದಿ ಸ್ಮರಣಾರ್ಥ ನಗರದ ಕೂಳೂರಿನ ತಣ್ಣೀರು ಬಾವಿಯ ಬಳಿಯಿರುವ ಪಾರ್ಕ್ ನಲ್ಲಿ ನಿರ್ಮಿಸಲಾಗಿರುವ ಸ್ಮಾರಕಕ್ಕೆ ಭಾನುವಾರ ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ, ಅಪರ ಜಿಲ್ಲಾಧಿಕಾರಿ ಡಾ. ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಮಂಗಳೂರು ತಹಶೀಲ್ದಾರ್ ಪುರಂದರ್ ಹಾಗೂ ಇತರೆ ಗಣ್ಯರು ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಿದರು.