ಹುತಾತ್ಮ ವೀರ ಸೈನಿಕರಿಗೆ ನಮನ: ಕದಂಬ ಸೈನ್ಯ, ಭಾರತೀಯ ಕಿಸಾನ್ ಸಂಘ, ದಸಂಸದಿಂದ ಆಯೋಜನೆ

Tribute to martyred brave soldiers Mandya

ಮಂಡ್ಯ: ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹುತಾತ್ಮರಾದ ಭಾರತ ಮಾತೆಯ ವೀರ ಸೈನಿಕರಿಗೆ ಕದಂಬ ಸೈನ್ಯ ಮತ್ತು ಭಾರತೀಯ ಕಿಸಾನ್ ಸಂಘ, ದಲಿತ ಸಂಘರ್ಷ ಸಮಿತಿಯಿಂದ ನಮನ ಸಲ್ಲಿಸಲಾಯಿತು.
ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಲ್ಯಾನ್ಸ್ ನ್ಯಾಯಕ್, ದಿನೇಶ್‌ಕುಮಾರ್ ಶರ್ಮಾ, ಹವಾಲ್ದಾರ್ ಸೂರಜ್‌ಸಿಂಗ್, ಸಚಿನ್ ಯಾದವ್ ವಾನಂಜೆ, ಕಮಲ್ ಕಾಂಬೋಜ್, ಅಮಿತ್‌ಚೌದರಿ, ಎಂ.ಮುರಳಿ ನಾಯಕ್, ಸುಬೇದಾರ್ ಮೇಜರ್ ಪವನ್‌ಕುಮಾರ್, ಸಿದ್ದಪ್ಪ ಎಸ್.ಮಾದರ, ಬಿ.ಎಸ್‌ಎ್ ಇನ್ಸ್‌ಪೆಕ್ಟರ್ ಮೊಹಮ್ಮದ್ ಇಮ್ತಿಯಾಜ್, ಸುಬೇದಾರ್ ಮೇಜರ್ ಪವನ್‌ಕುಮಾರ್, ಐಎಎಸ್ ಅಧಿಕಾರಿ, ಐವರು ನಾಗರಿಕರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಸಾಹಿತಿ ಡಾ.ಪ್ರದೀಪ್‌ಕುಮಾರ್ ಹೆಬ್ರಿ ಮಾತನಾಡಿ, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ಜನ್ಮ ಕೊಟ್ಟ ತಂದೆ, ತಾಯಿಗೆ ಮತ್ತು ಕುಟಂಬದವರಿಗೆ ನಮನ ಸಲ್ಲಿಸುವುದು ಪ್ರತಿಯೊಬ್ಬರ ಕರ್ತವ್ಯ. ದೇಶದ ಒಳ ಹಿತಶತ್ರುಗಳು ಅತ್ಯಂತ ಅಪಾಯಕಾರಿ. ಮಾತ್ರವಲ್ಲದೆ ಇವರು ಮೀರ್ ಸಾದಿಕ್‌ಗಳು. ಇಂತಹ ಭಯೋತ್ಪಾದಕರಿಗೆ ಸಮಾಜಘಾತುಕ ಶಕ್ತಿಗಳಿಗೆ ಆಶ್ರಯ ಬೆಂಬಲಕ್ಕೆ ನಿಂತಿದ್ದಾರೆ. ಇವರೇ ನಿಜವಾದ ದೇಶದ್ರೋಹಿಗಳು. ಇಂತಹವರನ್ನು ಗುರುತಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಕದಂಬ ಸೈನ್ಯ ರಾಜ್ಯಾಧ್ಯಕ್ಷ ಬೇಕ್ರಿ ರಮೇಶ್, ಭಾರತೀಯ ಕಿಸಾನ್ ಸಂಘದ ಪ್ರಾಂತ್ಯ ಅಧ್ಯಕ್ಷ ರಮೇಶರಾಜು ಹಾಡ್ಯ, ಜಿಲ್ಲಾಧ್ಯಕ್ಷ ಬಿ.ಪಿ. ಅಪ್ಪಾಜಿ, ಮುಖಂಡರಾದ ಜೋಸ್ೆ ರಾಮು, ಸಲ್ಮಾನ್, ರಾಮು ಚಿಕ್ಕೇಗೌಡನದೊಡ್ಡಿ, ಡಾ.ಅಕ್ರಂ ಪಾಷ, ನವೀನ್‌ಕುಮಾರ್, ಶಿವಣ್ಣ, ಅಚ್ಚುತ, ರುದ್ರಪ್ಪ, ಸಿದ್ದರಾಜು ಇತರರಿದ್ದರು.

blank
Share This Article
blank

ರಾತ್ರಿ 9 ಗಂಟೆ ಮೇಲೆ ಊಟ ಮಾಡೋದ್ರಿಂದ ಅನಾನುಕೂಲಗಳೇ ಅಧಿಕ: ಊಟಕ್ಕೆ ಸರಿಯಾದ ಸಮಯ ಯಾವುದು? | Eating

Eating: ಇತ್ತೀಚಿನ ದಿನಗಳಲ್ಲಿ ಅನೇಕ ಜನರು ತಡವಾಗಿ ಭೋಜನ ಮಾಡುತ್ತಿದ್ದಾರೆ, ಆದರೆ ವೈದ್ಯಕೀಯ ತಜ್ಞರು ಇದು…

ಮಳೆಗಾಲದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಈ ದೇಸಿ ಸೂಪರ್‌ಫುಡ್‌ ತಿನ್ನಿ | Immunity

Immunity: ಮಳೆಗಾಲ ಬಂತೆಂದರೆ ಸೋಂಕುಗಳು ಬರುವುದು ಸಹ ಸಹಜ. ತಂಪಾದ ಗಾಳಿಗೆ ಮನೆಗಳ ಸುತ್ತಲು ಬ್ಯಾಕ್ಟೀರಿಯಾ…

blank