More

    ಹಿರಿಯ ಆಟೋ ಚಾಲಕರಿಗೆ ಸನ್ಮಾನ

    ನಾಪೋಕ್ಲು: ಮೂರ್ನಾಡಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದಿಂದ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ಇತ್ತೀಚೆಗೆ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ನಡೆಯಿತು.

    ಸಂಘದ ಅಧ್ಯಕ್ಷ ಬಿ.ಡಿ ಉಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಶನ್ ರೈ, ತ್ರಿನೇತ್ರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ, ಫ್ರೆಂಡ್ಸ್ ವಾಹನ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ರಿಯಾಜ್, ನಾಪೋಕ್ಲು ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರಾಜೀವ್, ಅಮ್ಮತಿಯ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಭಿಜಿತ್, ಮೂರ್ನಾಡು ಪೊಲೀಸ್ ಉಪಠಾಣೆಯ ಪಿ.ಟಿ ಶ್ರೀನಿವಾಸ್, ಮೂರ್ನಾಡು ಪೊಲೀಸ್ ಉಪಠಾಣೆ ಸಿಬ್ಬಂದಿ ರಾಜೇಂದ್ರ, ಕಾಂತೂರು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಎನ್. ರಘು, ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಗೌರವ ಅಧ್ಯಕ್ಷ ತಿಮ್ಮಪ್ಪ, ಟಿ.ಕೆ ಚಂದ್ರ, ಸತೀಶ್ ಇತರರು ಪಾಲ್ಗೊಂಡಿದ್ದರು.

    ಸನ್ಮಾನ: ಹಿರಿಯ ಚಾಲಕ ವೇಣುಗೋಪಾಲ್, ಬಿ.ಆರ್.ಗಣೇಶ್, ಚೆಟ್ಟಿಮಾಡ ದಿವಿ, ಭೋಜಣ್ಣ, ಅಂಥೋನಿ, ರಘುಪತಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ಸಂಘದ ಸದಸ್ಯ ಸುಬಾನ್ ಅವರ ಪುತ್ರಿ ಎಂ.ಎ.ಇನ್ಷಾ , ದೇರಜೆ ಸತೀಶ್ ಅವರ ಪುತ್ರಿ ಭವಿತಾ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

    ಸಂಘದ ಸದಸ್ಯರ ಕುಟುಂಬದವರಿಗೆ ಕ್ರಿಕೆಟ್, ಹಗ್ಗಜಗ್ಗಾಟ ಮತ್ತು ಮಹಿಳೆಯರಿಗೆ ನಿಂಬೆಹಣ್ಣಿನ ಓಟ ಇತರ ಆಟೋಟಗಳನ್ನು ಏರ್ಪಡಿಸಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts