More

    ಬಿಜೆಪಿಯಿಂದ ತಿರಂಗಾ ಯಾತ್ರೆ

    ಹುಬ್ಬಳ್ಳಿ : ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಕೃತ್ಯಗಳು, ಘೋಷಣೆಗಳು ಹಾಗೂ ದೇಶ ವಿಭಜನೆಯ ಹೇಳಿಕಗಳನ್ನು ಖಂಡಿಸಿ, ದೇಶಭಕ್ತಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬಿಜೆಪಿ ಹು-ಧಾ ಪೂರ್ವ ವಿಧಾನಸಭೆ ಕ್ಷೇತ್ರ ಯುವ ಮೋರ್ಚಾ ವತಿಯಿಂದ ಸೋಮವಾರದಂದು ‘ತಿರಂಗಾ ಯಾತ್ರೆ ’ ಏರ್ಪಡಿಸಲಾಗಿತ್ತು.

    ಸರಾಫಗಟ್ಟಿ ವೃತ್ತದಿಂದ ಪ್ರಾರಂಭಗೊಂಡ ತಿರಂಗಾ ಯಾತ್ರೆ, ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ದಾಜಿಬಾನಪೇಟೆಯ ತುಳಜಾಭವಾನಿ ವೃತ್ತದಲ್ಲಿ ಮುಕ್ತಾಯಗೊಂಡಿತು.

    ಯುವ ಮೋರ್ಚಾ ಅಧ್ಯಕ್ಷ ಪ್ರೀತಮ್ ಅರಕೇರಿ, ಮಹಾನಗರ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪ್ರಭು ನವಲಗುಂದಮಠ, ಡಾ. ಮಲ್ಲಿಕಾರ್ಜುನ ಬಾಳಿಕಾಯಿ, ನಾರಾಯಣ ಜರತಾರಘರ, ದತ್ತಮೂರ್ತಿ ಕುಲಕರ್ಣಿ, ಜಗದೀಶ ಬುಳ್ಳನ್ನವರ, ಚಂದ್ರಶೇಖರ ಗೋಕಾಕ, ಸಂಗಮ ಹಂಜಿ, ಬಸವರಾಜ ಅಮ್ಮಿನಬಾವಿ, ಅನುಪ ಬಿಜವಾಡ, ವಿನಾಯಕ ಲದವಾ, ರಾಜು ಕೋರ್ಯಾಣಮಠ, ಲಕ್ಷ್ಮೀಕಾಂತ ಘೋಡಕೆ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts