ಶ್ರೀನಗರ: ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಅವರ ಕಾರು ಜಮ್ಮು-ಕಾಶ್ಮೀರದಲ್ಲಿ ಅಪಘಾತಕ್ಕಿಡಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ.
ಜಮ್ಮು-ಕಾಶ್ಮೀರದ ಶ್ರೀನಗರ ಹೆದ್ದಾರಿಯ ರಾಂಬನ್ ಬಳಿ ಘಟನೆ ನಡೆದಿದ್ದು ಲೋಡ್ ತುಂಬಿಕೊಂಡು ಹೊರಟಿದ್ದ ಲಾರಿಯೂ ಸಚಿವರ ಕಾರಿಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದು ಬಂದಿದೆ.
ಪ್ರಾಣಾಪಾಯದಿಂದ ಪಾರು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಅಧಿಕಾರಿಗಳು ಅಪಘಾತದಲ್ಲಿ ಯಾವುದೇ ತರಹದ ಅಹಿತಕರ ಘಟನೆಗಳು ನಡೆದಿಲ್ಲ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವರಿಗೆ ಬದಲಿ ವಾಹನದ ವ್ಯವಸ್ಥೆಯನ್ನು ಮಾಡಿ ಕೊಡಲಾಗಿದ್ದು ಅವರು ಕಾರ್ಯಕ್ರಮಕ್ಕೆ ತೆರಳಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಜ್ಯದಲ್ಲಿ 2 ದಿನ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಸೂಚನೆ
ಅಪಘಾತಕ್ಕೂ ಮುನ್ನ ಟ್ವೀಟ್
ರಾಜಸ್ಥಾನದ ಉಧಮ್ಪುರದಲ್ಲಿ ಲೀಗಲ್ ಸರ್ವೀಸ್ ಕ್ಯಾಂಪ್ಗೆ ಜಮ್ಮುವಿನಿಂದ ತೆರಳುತ್ತಿದ್ದ ಸಚಿವರು ಅಪಘಾತವಾಗುವ ಕೆಲ ಹೊತ್ತಿನ ಮುಂಚೆ ವಿಡಿಯೋ ಒಂದನ್ನು ಪೋಸ್ಟ್ ಮಾಡಿದ್ದರು. ರಸ್ತೆಯುದ್ದಕ್ಕೂ ಸುಂದರವಾದ ಪ್ರಯಾಣವನ್ನು ಆನಂದಿಸಬಹುದು ಎಂದು ಟ್ವೀಟ್ ಮಾಡಿದ್ದರು.