More

    ಪ್ರಯಾಣಿಕರನ್ನು ಇಳಿಸಲು ರಸ್ತೆಯಲ್ಲಿ ನಿಂತಿದ್ದ ಬಸ್‌ಗೆ ಟ್ರಕ್ ಡಿಕ್ಕಿ; ಎಂಟು ಮಂದಿ ವಿಧಿವಶ

    ಹರಿಯಾಣ: ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದೆ.  ಕಕ್ಕರ್ ಮಜ್ರಾ ಗ್ರಾಮದ ಬಳಿ ಇಂದು ನಡೆದ ಈ ಭೀಕರ ಅಪಘಾತದಲ್ಲಿ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 15 ಮಂದಿ ಗಾಯಗೊಂಡಿದ್ದಾರೆ.

    ಪಂಚಕುಲ-ಯಮುನಾನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಉತ್ತರ ಪ್ರದೇಶದ ಬರೇಲಿಯಿಂದ ಹಿಮಾಚಲ ಪ್ರದೇಶದ ಬಡ್ಡಿಗೆ ತೆರಳುತ್ತಿದ್ದ ಬಸ್ ಇದಾಗಿದೆ. ಕಕ್ಕರ್ ಮಜ್ರಾದಲ್ಲಿ ಮೂವರು ಪ್ರಯಾಣಿಕರನ್ನು ಇಳಿಸಲು ನಿಂತಿದ್ದ ಬಸ್​ಗೆ ಟ್ರಕ್ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದನ್ನೂ ಓದಿ: ಸೋನಿಯಾ ಗಾಂಧಿ ದೆಹಲಿ ಆಸ್ಪತ್ರೆಗೆ ದಾಖಲು

    ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಬಸ್ಸಿನಲ್ಲಿದ್ದವರಲ್ಲಿ ಹೆಚ್ಚಿನವರು ವಲಸೆ ಕಾರ್ಮಿಕರಾಗಿದ್ದಾರೆ . ಮೃತರು ಮತ್ತು ಗಾಯಾಳುಗಳನ್ನು ಸ್ಥಳೀಯರ ಸಹಾಯದಿಂದ ಬಸ್​ನಿಂದ ಹೊರತೆಗೆಯಲಾಗಿದೆ ಮತ್ತು ಟ್ರಕ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

    ಮಾ.9 ರಿಂದ ಆರಂಭವಾಗಲಿರುವ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬರುವಂತಿಲ್ಲ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts