ಹೊಸಪೇಟೆ: ನಗರದ ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯ ಆವರಣದಲ್ಲಿ ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯ ರೋಗ ಪತ್ತೆ ಆಂದೋಲನಾ ಜನ ಜಾಗೃತಿ ಜಾಥಾಕ್ಕೆ ಜಿಪಂ ಸಿಇಒ ಸದಾಶಿವ ಪ್ರಭು ಬಿ. ಸೋಮವಾರ ಚಾಲನೆ ನೀಡಿದರು.
ಕ್ಷಯರೋಗ ಮುಕ್ತಗೊಳಿಸಲು ಅಭಿಯಾನ
ರಾಜ್ಯವನ್ನು ಕ್ಷಯರೋಗದಿಂದ ಮುಕ್ತಗೊಳಿಸಲು ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ರೋಗದ ಲಕ್ಷಣ ಕಂಡು ಬಂದಲ್ಲಿ ಕೂಡಲೇ ತಪಾಸಣೆಗೆ ಒಳಪಡಬೇಕು. ಕಲ್ಲುಕ್ವಾರಿ, ಗಣಿಗಾರಿಕೆ, ಕಾರ್ಖಾನೆ ಹಾಗೂ ಕೈಗಾರಿಕೆ, ಕೊಳಚೆ ಪ್ರದೇಶ, ವಲಸಿಗರು, ಅಸಂಘಟಿತ ಕಾರ್ಮಿಕರು ರೋಗ ತುತ್ತಾಗುವ ಸಾಧ್ಯತೆ ಹೆಚ್ಚಿರುತ್ತದೆ. ಹಾಗಾಗಿ ಆರೋಗ್ಯ ಕಡೆ ಗಮನ ಕೊಡಬೇಕು ಎಂದು ಸಿಇಒ ಸದಾಶಿವ ಪ್ರಭು ಬಿ. ಹೇಳಿದರು.
ಇದನ್ನೂ ಓದಿ: ಜು.20ರಿಂದ ಗೃಹಲಕ್ಷ್ಮೀ ನೋಂದಣಿಗೆ ಚಾಲನೆ: ಮಹಿಳೆಯರಿಗೆ ಅನುಕೂಲ ಕಲ್ಪಿಸಲು ಜಿಲ್ಲಾಡಳಿತದಿಂದ ಆಗಿರುವ ಸಿದ್ಧತೆಗಳೇನು ಗೊತ್ತೆ?
ಜಿಲ್ಲಾ ಕ್ಷಯರೋಗ ನಿರ್ಮೂಲನಾ ಅಧಿಕಾರಿ ಜಗದೀಶ್ ಪಾಟ್ನೆ, ಆರೋಗ್ಯ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ.ದೊಡ್ಡಮನಿ ಮತ್ತಿತರರು ಇದ್ದರು.