blank

ಹರಳೂರು ಶ್ರೀವಿರಭದ್ರಸ್ವಾಮಿ ರಥೋತ್ಸವ

blank

ತುಮಕೂರು: ತಾಲೂಕಿನ ಇತಿಹಾಸ ಪ್ರಸಿದ್ದ ಹರಳೂರು ಶ್ರೀವಿರಭದ್ರಸ್ವಾಮಿ ರಥೋತ್ಸವ ಗುರುವಾರ ನೆರೆದಿದ್ದ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿತು.

ಶ್ರೀವಿರಭದ್ರಸ್ವಾಮಿ ಚೋಳರ ಕಾಲದಲ್ಲಿ ನಿರ್ಮಾಣವಾಗಿರುವ ದೇವಾಲಯವಾಗಿದ್ದು 500ಕ್ಕೂ ಹೆಚ್ಚು ವರ್ಷಗಳ ಕಾಲದ ಇತಿಹಾಸ ಹೊಂದಿದೆ,
ಪ್ರತಿವರ್ಷಯುಗಾದಿ ಮುಗಿದ 15 ದಿನಕ್ಕೆ ಆರಂಭವಾಗುವ ಶ್ರೀವಿರಭದ್ರಸ್ವಾಮಿ ಜಾತ್ರಾ ಮಹೋತ್ಸವ, ಸುಮಾರು ಒಂದು ವಾರಗಳ ನಡೆಯುವುದು ವಿಶೇಷ ಎನ್ನಿಸಿದೆ.

ರಥೋತ್ಸವದ ಅಂಗವಾಗಿ ಗುರುವಾರ ಬೆಳಗ್ಗೆಯಿಂದಲೇ ರಥ ಹೋಮ, ರಥ ಪ್ರತಿಷ್ಠಾಪನೆ ನಡೆದು, ಮಧ್ಯಾಹ್ನಒಂದುಗಂಟೆಯ ವೇಳೆಗೆ ಹರಳೂರು ಗ್ರಾಮಸ್ಥರು ಹಾಗೂ ಭಕ್ತಾಧಿಗಳ ಸಮ್ಮುಖದಲ್ಲಿ ಮಹಾ ರಥೋತ್ಸವ ನಡೆಯಿತು.ಸರ್ವಾಲಂಕೃತನಾದ ಶ್ರೀವಿರಭದ್ರಸ್ವಾಮಿಯ ಉತ್ಸವ ಮೂರ್ತಿ
ರಥೋತ್ಸವ ನಡೆಯಿತು.

ಜಾತ್ರಾ ಮಹೋತ್ಸವದ ಅಂಗವಾಗಿ ರಾತ್ರಿ 7.30ಕ್ಕೆ ಗ್ರಾಮದ ಶ್ರೀವಿರಭದ್ರಸ್ವಾಮಿ ಕಲಾವೃಂದದಕಲಾವಿದರಿಂದ ಶನಿಪ್ರಭಾವ ಅಥವ ಾನಲ್ಲತಂಗಾದೇವಿ ಎಂಬ ಪೌರಾಣಿಕ ನಾಟಕದ ಪ್ರದರ್ಶನ ನಡೆಯಿತು. ರಥೋತ್ಸವದ ನಂತರ ಶ್ರೀವಿರಭದ್ರಸ್ವಾಮಿಗೆ ಧೂಳೋತ್ಸವ, ಪುಷ್ಪಾಲಂಕಾರ, ಪಾನಕ ಸೇವೆ ನಡೆಯಿತು. ರಾತ್ರಿ 8.30ಕ್ಕೆ ಸಿಂಹ ವಾಹನೋತ್ಸವ, ನವಿಲು ವಾಹನ, ಬೆಳ್ಳಿ ಪಲ್ಲಕ್ಕಿ ಉತ್ಸವ, ನಂದಿವಾಹನ ಸೇವೆಗಳು ನೆರವ್ಭೆರಿಸುವ ಮೂಲಕ ರಥೋತ್ಸವದ ಕಾರ್ಯಕ್ರಮ ಮುಕ್ತಾಯಗೊಂಡವು.

Share This Article

ದಾಲ್ಚಿನ್ನಿ ಸೇವನೆ ಪುರುಷರ ಆರೋಗ್ಯಕ್ಕೆ ಅತ್ಯಂತ ಪ್ರಯೋಜನಕಾರಿ ಯಾಕೆ ಗೊತ್ತಾ? | Cinnamon

Cinnamon: ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ದಾಲ್ಚಿನ್ನಿ ಭಾರತೀಯರ ಮನೆಗಳಲ್ಲಿ ಹೆಚ್ಚಾಗಿ ಮಸಾಲೆ ಪದಾರ್ಥವಾಗಿ ಬಳಸುತ್ತಾರೆ. ಇದು…

ಬೀದಿ ಬದಿ ಅಂಗಡಿಗಳಿಂದ ಜ್ಯೂಸ್​ ಖರೀದಿಸಿ ಕುಡಿಯುವಾಗ ಎಚ್ಚರ… ಈ ಜ್ಯೂಸ್ ಅತ್ಯಂತ ಅಪಾಯಕಾರಿ! Soft Drinks

Soft Drinks : ದೇಶಾದ್ಯಂತ ಬೇಸಿಗೆಯ ಬಿಸಿ ಸುಡುತ್ತಿದೆ. ಸೂರ್ಯ ಶಾಖದಿಂದ ಬಳಲಿ ಬೆಂಡಾದ ಜನರು…

ಕೂದಲು ಉದುರುವಿಕೆ ಕಡಿಮೆ ಮಾಡಲು ಹೀಗೆ ಮಾಡಿ.. ಫಲಿತಾಂಶ ಗ್ಯಾರಂಟಿ! hair care

hair care: ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವುದು ಅನೇಕ ಜನರು ಎದುರಿಸುತ್ತಿರುವ ಒಂದು ದೊಡ್ಡ ಸಮಸ್ಯೆಯಾಗಿದೆ.…