ಮಂಗಳೂರು: ಸ್ವಾತಂತ್ರೃದ ಅಮೃತ ಮಹೋತ್ಸವದ ಪ್ರಯುಕ್ತ ಮಂಗಳೂರು ಮಹಾನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಆ.13ರಿಂದ 15ರ ವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6ರಿಂದ 9ರ ವರೆಗೆ ವೀಕ್ಷಣೆ ಮಾಡಬಹುದು ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ತಿಳಿಸಿದ್ದಾರೆ.