ತುಮಕೂರು: ಮುಂದಿನ ದಿನಗಳಲ್ಲಿ ಮಳೆಯಿಂದಾಗಿ ಯಾವುದೇ ತೊಂದರೆಯುAಟಾದಲ್ಲಿ ತುಮಕೂರು ಮಹಾನಗರ ಪಾಲಿಕೆಯ ಕಂಟ್ರೋಲ್ ರೂಂ 9449872599ಕ್ಕೆ ಕರೆ ಮಾಡಿ ದೂರು ದಾಖಲಿಸಲು ಪಾಲಿಕೆ ಆಯುಕ್ತ ಬಿ.ವಿ.ಅಶ್ವಿಜ ತಿಳಿಸಿದ್ದಾರೆ.
ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿನ ಉಪ್ಪಾರಹಳ್ಳಿ, ಅಂತರಸನಹಳ್ಳಿ, ದಿಬ್ಬೂರು, ಸದಾಶಿವನಗರ, ಅಮಾನಿಕೆರೆ ಕೋಡಿಹಳ್ಳ, ಶೆಟ್ಟಿಹಳ್ಳಿ, ಶಾಂತಿನಗರ ಹಾಗೂ ಎಲ್ಲಾ ಅಂಡರ್ ಪಾಸ್ಗಳು ಮತ್ತು ಇತರೆ ಸ್ಥಳಗಳಲ್ಲಿ ಮಳೆಯಿಂದಾಗಿ ಉಂಟಾದ ಪ್ರವಾಹ, ಹಾನಿಗಳಿಗೆ ಸ್ಥಳೀಯ ಸಾರ್ವಜನಿಕರಿಂದ ಬಂದ ದೂರುಗಳ ಬಗ್ಗೆ ಕ್ರಮಕೈಗೊಂಡು ಪಾಲಿಕೆ ಸಿಬ್ಬಂದಿಗಳು ಜೆಸಿಬಿ, ಜಟ್ಟಿಂಗ್ ಮತ್ತು ಸಕ್ಕಿಂಗ್ ಯತ್ರೋಪಕರಣಗಳಿಂದ ಸಮಸ್ಯೆ ಪರಿಹರಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.