More

    ತುಮಕೂರು: ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

    ತುಮಕೂರು: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ತುಮಕೂರಿನ ನಂದಿಹಳ್ಳಿಯ ಹೆದ್ದಾರಿಯಲ್ಲಿ ಬುಧವಾರ (ಡಿ.27) ರಾತ್ರಿ 12 ಗಂಟೆ ಸುಮಾರಿಗೆ ಸಂಭವಿಸಿದೆ.

    ಘಟನೆಯ ವಿವರ

    ಸಚಿವ ಮಧು ಬಂಗಾರಪ್ಪ ಇದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಯಾಮ ಸಂಭವಿಸಿಲ್ಲ. ಕಾರಿನ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಕಾರಿನಲ್ಲಿ ಮಧು ಬಂಗಾರಪ್ಪ ಸೇರಿ ಮೂವರು ಪ್ರಯಾಣಿಸುತ್ತಿದ್ದು, ಎಲ್ಲರೂ ಬಚಾವ್ ಆಗಿದ್ದಾರೆ. ಲಾರಿ ಚಾಲಕ ಕಾರನ್ನು ಉಜ್ಜಿಕೊಂಡು ಹೋಗಿದ್ದು, ಅಪಘಾತದಲ್ಲಿ ಕಾರಿನ ಮುಂಭಾಗ ಜಖಂ ಆಗಿದೆ. ಕಾರಿನಲ್ಲಿದ್ದವರಿಗೆ ಯಾವುದೇ ಗಾಯಗಳಾಗಿಲ್ಲ. ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗುವ ಮಾರ್ಗ ಮಧ್ಯೆ ಈ ದುರಂತ ಸಂಭವಿಸಿದ್ದು ಬದಲಿ ವಾಹನ ವ್ಯವಸ್ಥೆ ಮಾಡಿಕೊಂಡು ಸಚಿವರು ಬೆಂಗಳೂರಿಗೆ ತೆರಳಿದ್ದಾರೆ.

    ಈ ಸಂಬಂಧ ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ರಾಮಜನ್ಮಭೂಮಿ ಟ್ರಸ್ಟ್‌ನ ಬೃಹತ್ ಸಭೆಗೆ ಕ್ಷಣಗಣನೆ: ಇಂದು ರಾಮಲಲ್ಲಾ ಪತ್ರಿಮೆ ಬಗ್ಗೆ ನಿರ್ಧಾರ ಸಾಧ್ಯತೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts