ತುಮಕೂರು: ಶಿರಾ ವಿಧಾನಸಭೆ ಕ್ಷೇತ್ರದ ಉಪಸಮರ ದಿನೇದಿನೆ ರಂಗೇರುತ್ತಿದ್ದು, ಜಿದ್ದಾಜಿದ್ದಿ ಕಣದಲ್ಲಿ ಪಕ್ಷಾಂತರಿಗಳ ಹೈಜಂಪ್ ಜೋರಾಗಿದೆ.
ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಜಿಪಂ ಅಧ್ಯಕ್ಷೆ ಎಂ.ಲತಾ ಅವರ ಪತಿ ಜೆಡಿಎಸ್ ಮುಖಂಡ ಕಲ್ಕರೆ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಜೆಡಿಎಸ್ ಪಾಳಯದಲ್ಲಿ ಆತಂಕ ಶುರುವಾಗಿದೆ.
ರವಿಕುಮಾರ್ ಪತ್ನಿ ಲತಾ ಜೆಡಿಎಸ್ನಿಂದ ಜಿಪಂಗೆ ಆಯ್ಕೆಯಾಗಿದ್ದು, ಅಧ್ಯೆಯಾಗಿ ನಾಲ್ಕೂವರೆ ವರ್ಷದಿಂದಲೂ ಅಧಿಕಾರ ಅನುಭವಿಸುತ್ತಿದ್ದಾರೆ. ಈ ನಡುವೆ ಅಧ್ಯಕ್ಷೆ ವಿರುದ್ಧ ಸದಸ್ಯರು ಅವಿಶ್ವಾಸ ಮಂಡಿಸಿದ್ದಾರೆ. ಅ.7ರಂದು ಜಿಪಂ ಅಧ್ಯಕ್ಷೆ ವಿರುದ್ಧ ನಡೆಯಲಿರುವ ಅವಿಶ್ವಾಸ ನಿರ್ಣಯ ಸಭೆಯಲ್ಲಿ ಲತಾ ಅವರನ್ನು ಕಾಂಗ್ರೆಸ್ ಬೆಂಬಲಿಸಲಿದೆ. ಇದಕ್ಕೆ ಪ್ರತಿಯಾಗಿ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರವಿಕುಮಾರ್ ಕಾಂಗ್ರೆಸ್ಗೆ ಜಿಗಿದಿದ್ದಾರೆ. ಆ ಮೂಲಕ ಜಿಪಂ ಗದ್ದುಗೆ ಉಳಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿರಿ ಕುಸುಮಾ ತಲೆ ಮೇಲೆ ‘ಕೈ’ ಇಟ್ರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ !
ಭಾನುವಾರ ಕೆಪಿಸಿಸಿ ಕಚೇರಿಯಲ್ಲಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಕುರುಬ ಸಮುದಾಯದ ರವಿಕುಮಾರ್ ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಕ್ಷೇತ್ರ ಉಳಿಸಿಕೊಳ್ಳುವ ಸಂಕಲ್ಪ ತೊಟ್ಟಿರುವ ಜೆಡಿಎಸ್ಗೆ ದೊಡ್ಡ ಹಿನ್ನಡೆ ಎನಿಸಿದೆ.
ಯಾದವರಿಗೆ ಅಧ್ಯಕ್ಷ ಸ್ಥಾನ ಕೊಟ್ಟು ಶಿರಾ ಬೈ ಎಲೆಕ್ಷನ್ನಲ್ಲಿ ರಾಜಕೀಯ ಲಾಭ ಪಡೆಯುವ ಬಿಜೆಪಿ ಲೆಕ್ಕಾಚಾರ ಉಲ್ಟಾ ಹೊಡೆದಿದೆ. ಜೆಡಿಎಸ್ ಸದಸ್ಯರು ದಿಕ್ಕು ತೋಚದಂತಾಗಿದ್ದಾರೆ. ಸಾಕಷ್ಟು ಸಂಪನ್ಮೂಲದಿಂದ ಶಿರಾ ಕ್ಷೇತ್ರದಲ್ಲಿ ಗುರುತಿಸಿಕೊಂಡಿರುವ ರವಿಕುಮಾರ್ ಸೇರ್ಪಡೆ ಜಯಚಂದ್ರಗೆ ಲಾಭ ಎನ್ನಲಾಗಿದೆ.
ಶಿರಾ ಉಪಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿರುವ ಕಲ್ಕರೆ ರವಿಕುಮಾರ್ ಪಕ್ಷಾಂತರ ಕಾಂಗ್ರೆಸ್ಗೆ ಲಾಭ ತಂದುಕೊಡಲಿದೆ ಎಂಬ ಹಿನ್ನೆಲೆಯಲ್ಲಿ ಟಿ.ಬಿ.ಜಯಚಂದ್ರ ವಿಶೇಷ ಆಸಕ್ತಿವಹಿಸಿ ಪಕ್ಷಕ್ಕೆ ಕರೆತಂದಿದ್ದಾರೆ ಎನ್ನಲಾಗಿದೆ.
ಆರ್ಆರ್ ನಗರ ಬೈ ಎಲೆಕ್ಷನ್: ಕಾಂಗ್ರೆಸ್ ಅಭ್ಯರ್ಥಿ ಯಾರು ಗೊತ್ತಾ? ಇಲ್ಲಿದೆ ಡಿಕೆಶಿ ಫೈನಲ್ ಲಿಸ್ಟ್
ನನ್ನ ಮಗನ ಫೋಟೋ-ಹೆಸರು ಬಳಸಿದ್ರೆ ಬೆಂಕಿ ಹಚ್ಚಿಸ್ತೀನಿ: ಸೊಸೆ ವಿರುದ್ಧ ಸಿಡಿದೆದ್ದ ಡಿ.ಕೆ. ರವಿ ತಾಯಿ