ಇಂದೋರ್: ಮಧ್ಯಪ್ರದೇಶದ ಉಜ್ಜಯಿನಿಯ ಮಹಾಕಾಲೇಶ್ವರ ದೇವಾಲಯದ ಸಂಕೀರ್ಣದಲ್ಲಿ ವಿಶೇಷ ಸುರಂಗವನ್ನು ನಿರ್ಮಿಸಲಾಗುತ್ತಿದ್ದು, ಇದರ ಮೂಲಕ ಸುಮಾರು 8 ಲ ಭಕ್ತರು ಸುಲಭವಾಗಿ ಆವರಣಕ್ಕೆ ಭೇಟಿ ನೀಡಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
12 ಜ್ಯೋರ್ತಿಲಿಂಗಗಳಲ್ಲಿ ಒಂದಾದ ಮಹಾಕಾಳೇಶ್ವರ ದೇವಾಲಯವು ಪ್ರತಿದಿನ ಭಕ್ತಾದಿಗಳಿಂದ ತುಂಬಿರುತ್ತದೆ. ಜನರಿಗೆ ಅನುಕೂಲ ಕಲ್ಪಿಸಲು 242.35 ಕೋಟಿ ರೂಪಾಯಿ ವೆಚ್ಚದಲ್ಲಿ ಶ್ರೀ ಮಹಾಕಾಲ ಮಹಾಲೋಕ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಇದರ ಎರಡನೇ ಹಂತವನ್ನು ಅಕ್ಟೋಬರ್ 5ರಂದು ಲೋಕಾರ್ಪಣೆ ಆಗಲಿದೆ. ಈ ಯೋಜನೆ ಅಂಗವಾಗಿ ಸುರಂಗ ಮಾರ್ಗ ನಿರ್ಮಾಣ ಮಾಡಲಾಗಿದೆ.