More

    Ind vs Wi ಟಿ-20 ಸರಣಿ| ರಿಂಕು ಸಿಂಗ್​-ಋತುರಾಜ್​ ಕಡೆಗಣನೆ; ಕಿಡಿಕಾರಿದ ನೆಟ್ಟಿಗರು

    ಮುಂಬೈ: ವೆಸ್ಟ್​ ಇಂಡೀಸ್​ ವಿರುದ್ಧ ನಡೆಯಲಿರುವ ಟಿ-20 ಸರಣೆಗೆ ಭಾರತ ತಂಡವನ್ನು ಪ್ರಕಟಿಸಲಾಗಿದ್ದು, ಉದಯೋನ್ಮುಖ ಆಟಗಾರರಾದ ರಿಂಕು ಸಿಂಗ್​ ಹಾಗೂ ಋತುರಾಜ್​ ಗಾಯಕ್ವಾಡ್​ರನ್ನು ಪರಿಗಣಿಸದೆ ಇರುವುದು ಆಕ್ರೋಶಕ್ಕೆ ಗುರಿಯಾಗಿದೆ.

    ಈ ಕುರಿತು ಮಾಜಿ ಕ್ರಿಕೆಟಿಗರು, ವೀಕ್ಷಕ ವಿವರಣೆಕಾರರು ಸೇರಿದಂತೆ ಅನೇಕ ಕ್ರೀಡಾಭಿಮಾನಿಗಳು ಟ್ವೀಟ್​ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಐಪಿಎಲ್​ನಲ್ಲಿ ಗಮನಾರ್ಹ ಪ್ರದರ್ಶನದ ಹೊರತ್ತಾಗಿಯೂ ಈ ಇಬ್ಬರು ಆಟಗಾರರನ್ನು ಆಯ್ಕೆ ಸಮಿತಿ ಕಡೆಗಣಿಸಿರುವುದು ಹಲವರ ಅಸಮಾಧಾನಕ್ಕೆ ಕಾರಣವಾಗಿದೆ.

    ಈ ಕುರಿತು ಟ್ವೀಟ್​ ಮಾಡಿರುವ ಮಾಜಿ ಕ್ರಿಕೆಟಿಗ ಇರ್ಫಾನ್​ ಪಠಾಣ್​ ಶೀಘ್ರದಲ್ಲೇ ಸಮಯ ಬಂದೇ ಬರುತ್ತದೆ ಎಂದು ಪರೋಕ್ಷವಾಗಿ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ್ದಾರೆ.

    ಇದನ್ನೂ ಓದಿ: ತೋತಾಪುರಿ-2 ನಾಯಕರ ಫಸ್ಟ್​​ ಲುಕ್​ ಬಿಡುಗಡೆ

    ಋತುರಾಜ್​, ರಿಂಕು ಆಯ್ಕೆ ಮಾಡದಿರುವ ಕುರಿತು ಟ್ವೀಟ್​ ಮಾಡಿರುವ ವೀಕ್ಷಕ ವಿವರಣೆಗಾರ ಹರ್ಷ ಬೋಗ್ಲೆ ಮುಂಬೈನ ಯುವ ಬ್ಯಾಟರ್​ ತಿಲಕ್​ ವರ್ಮಾರನ್ನು ನೇರವಾಗಿ ಆಯ್ಕೆ ಮಾಡಲಾಗಿದೆ. ಇದೊಂದು ಕಠಿಣ ನಿರ್ಧಾರವಾಗಿದ್ದು, ಫಿನಿಶರ್​ ಸ್ಥಾನಕ್ಕೆ ರಿಂಕು ಸಿಂಗ್​ ಹೆಚ್ಚು ಸೂಕ್ತವಾಗಿದ್ದರು ಎಂದು ಅಭಿಪ್ರಾಯಪಟ್ಟಿದ್ದಾರೆ.

    ಇತ್ತ ರಿಂಕು ಸಿಂಗ್​ ಹಾಗೂ ಋಉತುರಾಜ್​ ಗಾಯಕ್ವಾಡ್​ರನ್ನು ಆಯ್ಕೆ ಮಾಡದಿರುವ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಕ್ರೀಡಾಭಿಮಾನಿಗಳು ಬಿಸಿಸಿ ಹಾಗೂ ಆಯ್ಕೆ ಸಮಿತಿ ವಿರುದ್ಧ ಸರಣಿ ಟ್ವೀಟ್​ ಮಾಡುವ ಮೂಲಕ ಕಿಡಿಕಾರಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts