ಅನೈತಿಕ ಸಂಬಂಧ, ಗಂಡನೇ ಕೊಂದ!?; ಜೋಡಿ ಕೊಲೆ ಪ್ರಕರಣ, ಒಬ್ಬನ ಬಂಧನ…

ಆನೇಕಲ್: ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸೇರಿ ಮಹಿಳೆಯೊಬ್ಬರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ವಿಪರ್ಯಾಸವೆಂದರೆ ಕೊಲೆಗೀಡಾದ ಮಹಿಳೆಯ ಪತಿಯೇ ಆರೋಪಿ. ಚಿಕ್ಕಹಾಗಡೆ ವಾಸಿ ಮುತ್ತುರಾಜ ಬಂಧಿತ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಸೂರ್ಯನಗರ ಸಿಟಿಯ ರಾಮಯ್ಯ ಬಡಾವಣೆಯಲ್ಲಿ ಡಿ. 11ರಂದು ಈ ಜೋಡಿ ಕೊಲೆಯಾಗಿತ್ತು. ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿ ಮತ್ತು ಕಾವ್ಯ ಎಂಬಾಕೆಯ ಶವ ಜೊತೆಯಲ್ಲೇ ಕಂಡುಬಂದಿತ್ತು. ಇವರಿಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಇದನ್ನೂ ಓದಿ: ರಾಜಧಾನಿ … Continue reading ಅನೈತಿಕ ಸಂಬಂಧ, ಗಂಡನೇ ಕೊಂದ!?; ಜೋಡಿ ಕೊಲೆ ಪ್ರಕರಣ, ಒಬ್ಬನ ಬಂಧನ…