ವಿಜಯಪುರ: ಬಾವಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾದ ಘಟನೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ.
ಸೈಯದ್ ಪಟೇಲ್ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಲೆಂದು ಸನ್ನಾವುಲ್ ಗುಂದಗಿ(17) ಸೋಹೆಲ್(14) ತೆರಳಿದ್ದರು. ಆದರೆ ಇಬ್ಬರೂ ನೀರುಪಾಲಾಗಿದ್ದಾರೆ. ಅವರಲ್ಲಿ ಸನ್ನಾವುಲ್ಲನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸೋಹೆಲ್ಗಾಗಿ ಹುಡುಕಾಟ ಮುಂದುವರಿದಿದೆ.
ಇವರಿಬ್ಬರಿಗೂ ಈಜಲು ಬರುತ್ತಿರಲಿಲ್ಲ. ಆದರೂ ಧೈರ್ಯ ಮಾಡಿ ಹೋಗಿದ್ದರು ಎನ್ನಲಾಗಿದೆ. ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್)