More

    ಈಜು ಬಾರದಿದ್ದರೂ ಬಾವಿಗಿಳಿದ ಇಬ್ಬರು ಬಾಲಕರು ನೀರುಪಾಲು; ಓರ್ವನ ಶವ ಪತ್ತೆ, ಇನ್ನೊಬ್ಬನಿಗಾಗಿ ಹುಡುಕಾಟ

    ವಿಜಯಪುರ: ಬಾವಿಯಲ್ಲಿ ಈಜಲು ಹೋದ ಇಬ್ಬರು ಯುವಕರು ನೀರುಪಾಲಾದ ಘಟನೆ ಸಿಂದಗಿ ಪಟ್ಟಣದಲ್ಲಿ ನಡೆದಿದೆ.

    ಸೈಯದ್​ ಪಟೇಲ್​ ಎಂಬುವರಿಗೆ ಸೇರಿದ ಜಮೀನಿನಲ್ಲಿದ್ದ ಬಾವಿಯಲ್ಲಿ ಈಜಲೆಂದು ಸನ್ನಾವುಲ್ ಗುಂದಗಿ(17) ಸೋಹೆಲ್(14) ತೆರಳಿದ್ದರು. ಆದರೆ ಇಬ್ಬರೂ ನೀರುಪಾಲಾಗಿದ್ದಾರೆ. ಅವರಲ್ಲಿ ಸನ್ನಾವುಲ್ಲನ ಮೃತದೇಹವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹೊರತೆಗೆದಿದ್ದಾರೆ. ಸೋಹೆಲ್​ಗಾಗಿ ಹುಡುಕಾಟ ಮುಂದುವರಿದಿದೆ.

    ಇವರಿಬ್ಬರಿಗೂ ಈಜಲು ಬರುತ್ತಿರಲಿಲ್ಲ. ಆದರೂ ಧೈರ್ಯ ಮಾಡಿ ಹೋಗಿದ್ದರು ಎನ್ನಲಾಗಿದೆ. ಸಿಂದಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. (ದಿಗ್ವಿಜಯ ನ್ಯೂಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts