ಜೈಪುರ: ಸರ್ಕಾರಿ ಕಚೇರಿ ಕಟ್ಟಡವೊಂದರ ಬೇಸ್ಮೆಂಟ್ನಲ್ಲಿ ಬರೋಬ್ಬರಿ 2.1 ಕೋಟಿ ರೂಪಾಯಿಗೂ ಅಧಿಕ ನಗದು ಮತ್ತು 1 ಕೆಜಿ ಚಿನ್ನದ ಬಿಸ್ಕೆಟ್ ಪತ್ತೆಯಾಗಿರುವುದು ಅಧಿಕಾರಿಗಳನ್ನು ಹುಬ್ಬೇರಿಸುವಂತೆ ಮಾಡಿದೆ.
ಈ ಘಟನೆ ರಾಜಸ್ಥಾನ ರಾಜಧಾನಿ ಜೈಪುರದಲ್ಲಿ ನಡೆದಿದೆ. ಯೋಜನಾ ಭವನದ ಬೇಸ್ಮೆಂಟ್ನ ಕಪಾಟಿನಲ್ಲಿ ಅಪಾರ ಪ್ರಮಾಣದ ಸಂಪತ್ತು ಪತ್ತೆಯಾಗಿದೆ. ಇದೇ ಕಟ್ಟಡದಲ್ಲಿ ಆದಾಯ ತೆರಿಗೆ ಇಲಾಖೆ ಸಹ ಕಾರ್ಯನಿರ್ವಹಿಸುತ್ತಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ರಾಜಸ್ಥಾನ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದನ್ನೂ ಓದಿ: ಯಾರು ಈ ಗಂಗಾಧರ ಅಜ್ಜ? ಅವರ ಹೆಸರಿನಲ್ಲಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಿದ್ದೇಕೆ?
ಕಟ್ಟಡದಲ್ಲಿ ಹಣ ಮತ್ತು ಚಿನ್ನ ಪತ್ತೆಯಾಗಿದೆ ಎಂದು ಐಟಿ ಇಲಾಖೆಯ ಹೆಚ್ಚುವರಿ ನಿರ್ದೇಶಕರೇ ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಜೈಪುರದ ಪೊಲೀಸ್ ಆಯುಕ್ತ ಆನಂದ್ ಶ್ರೀವಾಸ್ತವ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಸದ್ಯ ಈ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪೊಲೀಸರು ಪರಿಶೀಲಿಸುತ್ತಿದ್ದಾರೆ. (ಏಜೆನ್ಸೀಸ್)
ದೇವರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ
ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ.ಶಿವಕುಮಾರ್