More

    ಕಾರುಗಳ ಮಧ್ಯೆ ಭೀಕರ ಅಪಘಾತ; ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ, ಒಬ್ಬರ ಕಾಲು ಮುರಿತ…

    ತುಮಕೂರು: ರಾಜ್ಯದಲ್ಲಿ ದಿನವೂ ಒಂದಲ್ಲ ಒಂದು ಕಡೆ ಭೀಕರ ಅಪಘಾತ ಸಂಭವಿಸುತ್ತಿದ್ದು, ಸಾವು-ನೋವುಗಳೂ ಆಗುತ್ತಿವೆ. ಇಂದು ಕೂಡ ಒಂದು ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿದರೆಗುಡಿ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಸ್ವಿಫ್ಟ್ ಮತ್ತು ಬ್ರೆಝಾ ಕಾರುಗಳು ಮುಖಾಮುಖಿ ಡಿಕ್ಕಿಯಾಗಿವೆ. ಸ್ವಿಫ್ಟ್ ಕಾರಿನಲ್ಲಿದ್ದ ಸಿ.ಎಸ್​.ಪುರ ಮೂಲದ ರಾಜೇಶ್​ ಹಾಗೂ ಬೆಲವತ್ತ ಗ್ರಾಮದ ವೆಂಕಟಾಚಲ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

    ಬ್ರೆಝಾದಲ್ಲಿದ್ದ ಒಬ್ಬ ವ್ಯಕ್ತಿಯ ಕಾಲು ಮುರಿತಕ್ಕೊಳಗಾಗಿದೆ. ಸಣ್ಣಪುಟ್ಟ ಗಾಯಕ್ಕೊಳಗಾಗಿರುವ ಇತರ ಮೂವರನ್ನು ತಿಪಟೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಸ್ಥಳಕ್ಕೆ ಹೊನ್ನವಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಪಲ್ಟಿಯಾದ ಕಾರು, ತಂದೆ-ಮಗ ಸ್ಥಳದಲ್ಲೇ ಸಾವು..

    ಭೀಕರ ಅಪಘಾತ, ಬಿಜೆಪಿ ಮುಖಂಡನ ಕಾಲು ತುಂಡು: ಇನ್ನಿಬ್ಬರ ಪರಿಸ್ಥಿತಿ ಚಿಂತಾಜನಕ, ಒಟ್ಟು ಐವರಿಗೆ ಗಾಯ..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts