ಬೆಳಗಾವಿ: ರಾಜ್ಯದಲ್ಲಿ ಸಂಭವಿಸಿದ ಎರಡು ಭೀಕರ ಅಪಘಾತಗಳಲ್ಲಿ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಈ ಎರಡು ಅಪಘಾತಗಳು ಸಂಭವಿಸಿವೆ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಅಳಗವಾಡಿ ಗ್ರಾಮದಲ್ಲಿ ಬೈಕ್ ಹಾಗೂ ಟ್ರ್ಯಾಕ್ಟರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಪುಂಡಲೀಕ ಜಟಗುಂಡಿ (28) ಹಾಗೂ ಶಿವಾನಂದ ಗಲಗಲಿ (30) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ರಾಯಭಾಗದ ಮೊರಬ ಗ್ರಾಮದ ಬಳಿ ಸವಾರನ ನಿಯಂತ್ರಣ ತಪ್ಪಿ ಬೈಕ್ ವಿದ್ಯುತ್ ಕಂಬಕ್ಕ ಡಿಕ್ಕಿ ಹೊಡೆದಿದ್ದು, ಬೈಕ್ ಸವಾರ ಮಾರುತಿ ಕದಮ್ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ. ಈ ಎರಡು ಅಪಘಾತಗಳ ಸಂಬಂಧ ರಾಯಭಾಗ ಹಾಗೂ ಹಾರೂಗೇರಿ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.
ರಾಜಿ ಮಾಡಿಸಿದ್ದರೂ ಆತ್ಮಹತ್ಯೆ; ಪತಿಯ ಮನೆಯಲ್ಲಿ ಪತ್ನಿಯ ದುರಂತ ಅಂತ್ಯ..