More

    ಷಾ ಕಾರ್ಯಕ್ರಮದಲ್ಲಿ ಭಾರಿ ಬದಲಾವಣೆ; ಕೆಂಪೇಗೌಡರ ಜನ್ಮಸ್ಥಳಕ್ಕೆ ಭೇಟಿ ರದ್ದು, ದೇವಾಲಯ ದರ್ಶನವೂ ಕ್ಯಾನ್ಸೆಲ್

    ದೇವನಹಳ್ಳಿ: ಕರ್ನಾಟಕಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವರ ಅಮಿತ್ ಷಾ ಅವರ ಕಾರ್ಯಕ್ರಮದಲ್ಲಿ ಭಾರಿ ಬದಲಾವಣೆ ಆಗಿದೆ. ಕೊನೆಯ ಕ್ಷಣದಲ್ಲಿ ಪೂರ್ವ ನಿಗದಿತ ಎರಡು ಪ್ರಮುಖ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದೆ.

    ಬೆಂಗಳೂರಿನ ದೇವನಹಳ್ಳಿಯಲ್ಲಿ ನಡೆಯುತ್ತಿರುವ ವಿಜಯ ಸಂಕಲ್ಪ ಯಾತ್ರೆಗೆ ಬೀದರ್​ನಿಂದ ನೇರವಾಗಿ ಆಗಮಿಸಿದ ಅಮಿತ್ ಷಾ ಈ ನಡುವೆ ನಾಡಪ್ರಭು ಕೆಂಪೇಗೌಡರ ಜನ್ಮಸ್ಥಳಕ್ಕೆ ಭೇಟಿ ನೀಡುವುದಿತ್ತು. ಹಾಗೆಯೇ ಚಿಕ್ಕಬಳ್ಳಾಪುರದ ಚನ್ನಕೇಶವ ದೇವಾಲಯಕ್ಕೂ ಭೇಟಿ ನೀಡುವುದಿತ್ತು. ಆದರೆ ಕೊನೆಯ ಕ್ಷಣದಲ್ಲಿ ಈ ಎರಡೂ ಕಾರ್ಯಕ್ರಮಗಳನ್ನು ರದ್ದು ಮಾಡಲಾಗಿದ್ದು, ಇದಕ್ಕೆ ಸಮಯದ ಅಭಾವ ಕಾರಣ ಎನ್ನಲಾಗಿದೆ.

    ಇದನ್ನೂ ಓದಿ: ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

    ಸದ್ಯ ದೇವನಹಳ್ಳಿಯ ಜೂನಿಯರ್​ ಕಾಲೇಜು ಮೈದಾನದಲ್ಲಿ ವಿಜಯ ಸಂಕಲ್ಪ ಯಾತ್ರೆ ಸಮಾವೇಶ ನಡೆಯುತ್ತಿದ್ದು, ಅಮಿತ್ ಷಾ ಅದರಲ್ಲಿ ಉಪಸ್ಥಿತರಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಷಾ ನೇರವಾಗಿ ಸಮಾವೇಶದ ಸ್ಥಳಕ್ಕೆ ಆಗಮಿಸಿದ್ದಾರೆ.

    ಇದನ್ನೂ ಓದಿ: ಗೃಹ ಸಚಿವರ ಬೆಂಗಾವಲು​ ವಾಹನ ಡಿಕ್ಕಿ, ಬೈಕ್ ಸವಾರ ಸಾವು; ಅಪಘಾತದ ಬಗ್ಗೆ ತಿಳಿದೂ ಹಾಗೇ ಹೋದ್ರಾ ಹೋಂ​ ಮಿನಿಸ್ಟರ್​?

    ಕೆಂಪೇಗೌಡರ ಜನ್ಮಸ್ಥಳ ಆವತಿ ಗ್ರಾಮಕ್ಕೆ ಬಂದು ಅಲ್ಲಿ ಕೆಂಪೇಗೌಡರ ಪುತ್ಥಳಿಗೆ ಪುಷ್ಪಾರ್ಚನೆ ಮಾಡುವುದಿದ್ದು, ಅದು ರದ್ದಾಗಿದೆ. ಷಾ ಬರಲಿದ್ದಾರೆ ಎಂಬ ನಿರೀಕ್ಷೆಯಲ್ಲಿ ಅಲ್ಲಿ ಸಂಭ್ರಮದ ವಾತಾವರಣ ಮನೆ ಮಾಡಿದ್ದು, ಭಾರಿ ಕಟೌಟ್​-ಬ್ಯಾನರ್​ಗಳನ್ನು ಹಾಕಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ಅನಿವಾರ್ಯವಾಗಿ ರದ್ದಾಗಿದೆ.

    ಕಲ್ಯಾಣ ಮಂಟಪದಲ್ಲೇ ಕುಸಿದು ಬಿದ್ದ ವರ; ಆಸ್ಪತ್ರೆಯ ಮಾರ್ಗಮಧ್ಯೆ ಸಾವು

    ಎರಡನೇ ಪತಿಯೂ ಸಾವಿಗೀಡಾದ್ದರಿಂದ ನೊಂದು ಹೆಣ್ಣುಮಕ್ಕಳಿಬ್ಬರ ಜತೆ ಒಂದೇ ಕುಣಿಕೆಗೆ ಕೊರಳೊಡ್ಡಿದ ತಾಯಿ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts