More

    ಮರಕ್ಕೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಹದಿನೈದರ ಬಾಲಕರಿಬ್ಬರ ಮರಣ

    ಗದಗ: ಮೋಜಿಗಾಗಿ ಈಜಿಗಾಗಿ ಬೈಕ್​ನಲ್ಲಿ ಹೋಗಿದ್ದ ಹದಿನೈದು ವರ್ಷದ ಬಾಲಕರಿಬ್ಬರು ಅಲ್ಲಿಂದ ಮರಳುವಾಗ ಮರಕ್ಕೆ ಬೈಕ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮರಣಕ್ಕೀಡಾದ ಪ್ರಕರಣವೊಂದು ನಡೆದಿದೆ. ಗದಗ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.

    ಗದಗದ ರೋಣ ನಿವಾಸಿಗಳಾದ ಅನುಪ ಇಟಗಿ (15), ಶ್ರೀಶಾಂತ ಗಡಗಿ (15) ಸಾವಿಗೀಡಾದ ಬಾಲಕರು. ರೋಣ ಪಟ್ಟಣದ ಬಸ್​ ಡಿಪೋ ಬಳಿ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬರುತ್ತಿದ್ದ ಇವರ ಬೈಕ್ ನಿಯಂತ್ರಣ ತಪ್ಪಿ ಮರಕ್ಕೆ ಅಪ್ಪಳಿಸಿದೆ.

    ಇದನ್ನೂ ಓದಿ: ಹೆಲ್ಮೆಟ್​ ಧರಿಸದ ಮಹಿಳಾ ಪಿಎಸ್​ಐ; ಟ್ವೀಟ್ ವೈರಲ್ ಆಗುತ್ತಿದ್ದಂತೆ ಪ್ರಕರಣ ದಾಖಲು, ದಂಡ ವಿಧಿಸಿದ ಪೊಲೀಸರು

    ಇವರು ಗದಗದ ಅಬ್ಬಿಗೇರಿ ಗ್ರಾಮದ ಬಳಿಯ ಕಲಾಕಾಶಿ ಈಜು‌ಕೊಳ್ಳಕ್ಕೆ ಹೋಗಿ ವಾಪಸ್ ಬರುವಾಗ ಈ ಅವಘಡ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಅಂದು ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಇಂದು ಬಿ.ಎಲ್.ಸಂತೋಷ್ ಮರುಪ್ರಶ್ನೆ!: ವಿಷಯ ಇದು..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts