ಗದಗ: ಬೈಕ್ ಮತ್ತು ಗೂಡ್ಸ್ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಪರಸಾಪೂರ ಕ್ರಾಸ್ ಬಳಿ ಈ ಅಪಘಾತ ಉಂಟಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ಅಶೋಕ್, ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ವಿ.ಎಸ್. ಬೂದಿಹಾಳ ಸ್ಥಳದಲ್ಲೇ ಸಾವಿಗೀಡಾದ ಸವಾರರು. ಇವರು ಶಿರಹಟ್ಟಿಯಿಂದ ಮಾಗಡಿ ಕಡೆಗೆ ಹೋಗುತ್ತಿದ್ದರು.
ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ ಹಿಂದುವಿರೋಧಿ ತಪ್ಪುಮಾಹಿತಿ: ಅಧ್ಯಯನವೊಂದರಿಂದ ಬಹಿರಂಗ..
ಅಪಘಾತ ಸಂಭವಿಸುತ್ತಿದ್ದಂತೆ ಗೂಡ್ಸ್ ವಾಹನ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶಿರಹಟ್ಟಿ ಠಾಣೆಯ ಸಿಪಿಐ ವಿಕಾಸ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟ್ವಿಟರ್ ಟ್ರೆಂಡಿಂಗ್ನಲ್ಲಿ ಪುನೀತ್ ರಾಜಕುಮಾರ್; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್..