More

    ಗೂಡ್ಸ್​ ವಾಹನ-ಬೈಕ್ ಭೀಕರ ಅಪಘಾತ; ಅಧಿಕಾರಿಗಳಿಬ್ಬರೂ ಸ್ಥಳದಲ್ಲೇ ಸಾವು..

    ಗದಗ: ಬೈಕ್ ಮತ್ತು ಗೂಡ್ಸ್​ ವಾಹನಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಪರಸಾಪೂರ ಕ್ರಾಸ್ ಬಳಿ ಈ ಅಪಘಾತ ಉಂಟಾಗಿದೆ.

    ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕಾಧಿಕಾರಿ ಅಶೋಕ್, ಸಮಾಜ ಕಲ್ಯಾಣ ಇಲಾಖೆ ಮ್ಯಾನೇಜರ್ ವಿ.ಎಸ್. ಬೂದಿಹಾಳ ಸ್ಥಳದಲ್ಲೇ ಸಾವಿಗೀಡಾದ ಸವಾರರು. ಇವರು ಶಿರಹಟ್ಟಿಯಿಂದ ಮಾಗಡಿ ಕಡೆಗೆ ಹೋಗುತ್ತಿದ್ದರು.

    ಇದನ್ನೂ ಓದಿ: ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿದೆ ಹಿಂದುವಿರೋಧಿ ತಪ್ಪುಮಾಹಿತಿ: ಅಧ್ಯಯನವೊಂದರಿಂದ ಬಹಿರಂಗ..

    ಅಪಘಾತ ಸಂಭವಿಸುತ್ತಿದ್ದಂತೆ ಗೂಡ್ಸ್ ವಾಹನ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಶಿರಹಟ್ಟಿ ಠಾಣೆಯ ಸಿಪಿಐ ವಿಕಾಸ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿರಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಟ್ವಿಟರ್ ಟ್ರೆಂಡಿಂಗ್​ನಲ್ಲಿ ಪುನೀತ್ ರಾಜಕುಮಾರ್​; ವೈರಲ್ ಆಗುತ್ತಿದೆ ಲಕ್ಕಿಮ್ಯಾನ್ ಲುಕ್​..

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts