ತಮಿಳುನಾಡು: ಮೂರು ಲಕ್ಷ ರೂಪಾಯಿ ಮೌಲ್ಯದ ನಿಷೇಧಿತ ಗುಟ್ಕಾ ಮತ್ತು ಪಾನ್ ಮಸಾಲವನ್ನು ಅಕ್ರಮವಾಗಿ ಸಂಗ್ರಹಿಸಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ ನಡೆದಿದೆ.
ಇದನ್ನೂ ಓದಿ: ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್ ಆಸ್ಪತ್ರೆಗೆ ದಾಖಲು
ಬಂಧಿತ ಆರೋಪಿಗಳಾದ ವೆಂಕಟೇಶನ್ ಮತ್ತು ದೊರೈಮುರುಗನ್ ಸಹೋದರರಾಗಿದ್ದು, ವೆಲ್ಲೂರಿನ ಪೋನೈ ಎಂಬಲ್ಲಿ ದಿನಸಿ ಅಂಗಡಿಯ ಮಾಲೀಕರಾಗಿದ್ದಾರೆ ಎಂದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ.
ಬಾಲಕಿಯರಿಬ್ಬರ ಮೇಲೆ ಗ್ಯಾಂಗ್ರೇಪ್: ರಾತ್ರಿ ಇಡೀ ಮಕ್ಕಳು ಹೊರಗಿದ್ದಾಗ ಮನೆಯವರು ಯಾಕೆ ಸುಮ್ಮನಿದ್ದರು ಎಂದ ಸಿಎಂ!
ಪೊಲೀಸರು ಆರೋಪಿಗಳ ದಿನಸಿ ಅಂಗಡಿ ಮೇಲೆ ದಾಳಿ ಮಾಡಿದಾಗ ಗೋದಾಮಿನಲ್ಲಿ ಅಪಾರ ಪ್ರಮಾಣದ ನಿಷೇಧಿತ ಗುಟ್ಕಾ-ಪಾನ್ ಮಸಾಲ ಪತ್ತೆಯಾಗಿದೆ. ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)