More

    ಕಾಮಗಾರಿ ಹಂತದಲ್ಲಿದ್ದ ಕಟ್ಟಡ ಕುಸಿತ, ಒಬ್ಬ ಸ್ಥಳದಲ್ಲೇ ಸಾವು; ಇನ್ನೊಬ್ಬ ಆಸ್ಪತ್ರೆಗೆ ಕೊಂಡೊಯ್ಯುವಾಗ ನಿಧನ..

    ಬೆಂಗಳೂರು: ಕಾಮಗಾರಿ ಹಂತದಲ್ಲಿದ್ದ ಕಟ್ಟಡ ಕುಸಿತಕ್ಕೀಡಾದ್ದರಿಂದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ನಿರ್ಮಾಣ ನಡೆಯುತ್ತಿದ್ದ ಸಂದರ್ಭ ಸಂಭವಿಸಿದ ಈ ದುರಂತದಲ್ಲಿ ಒಬ್ಬ ಸ್ಥಳದಲ್ಲೇ ಮೃತಪಟ್ಟರೆ ಮತ್ತೊಬ್ಬ ಆಸ್ಪತ್ರೆಗೆ ಕೊಂಡೊಯ್ಯುವಾಗ ಮಾರ್ಗಮಧ್ಯೆ ಸಾವಿಗೀಡಾಗಿದ್ದಾನೆ.

    ಮಾರತಹಳ್ಳಿ ಸಮೀಪದ ದೇವರಬೀಸನಹಳ್ಳಿ ಬಳಿ ವಜ್ರಂ ಕನ್​ಸ್ಟ್ರಕ್ಷನ್​ ಕಂಪನಿ ನಡೆಸುತ್ತಿದ್ದ ಕಾಮಗಾರಿ ವೇಳೆ ಈ ದುರಂತ ಸಂಭವಿಸಿದೆ. ಇದರಲ್ಲಿ ಕೊಪ್ಪಳ ಮೂಲದ ಭೀಮಣ್ಣ(37), ಜಂಬಣ್ಣ (40) ಮೃತಪಟ್ಟಿದ್ದು, ಇನ್ನೊಬ್ಬ ಕಾರ್ಮಿಕನಿಗೆ ಗಂಭೀರ ಗಾಯಗಳಾಗಿವೆ.

    ಇದನ್ನೂ ಓದಿ: ಹೆಂಡತಿಗೆ ಕಿರುಕುಳ ಕೊಟ್ಟು ಸಾವು ತಂದುಕೊಂಡ ಗಂಡ; ಆಕೆ ಹೊಡೆಯಿರಿ ಎಂದಳು, ಅವರಿಬ್ಬರು ಕೊಂದೇ ಬಿಟ್ಟರು…

    ದುರಂತ ಸಂಭವಿಸುವ ಸಂದರ್ಭದಲ್ಲಿ ಒಟ್ಟು ಆರು ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆ ಪೈಕಿ ಇಬ್ಬರು ಮೃತಪಟ್ಟಿದ್ದು, ಇನ್ನೊಬ್ಬನಿಗೆ ತೀವ್ರ ಗಾಯಗಳಾಗಿವೆ. ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಸ್ಥಳಕ್ಕೆ ಮಾರತಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

    ಇದನ್ನೂ ಓದಿ: ಒಂದೇ ಮನೆಯ ನಾಲ್ವರು ಕರೊನಾಗೆ ಬಲಿ; 2- 3 ದಿನಗಳ ಅಂತರದಲ್ಲಿ ಇಬ್ಬಿಬ್ಬರ ಸಾವು!

    ಕರೊನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ನಿಮ್ಮಲ್ಲಿ ಈ ಗೊಂದಲಗಳಿವೆಯೇ? ಹಾಗಿದ್ದರೆ ಇಲ್ಲಿವೆ ನೋಡಿ ಸ್ಪಷ್ಟೀಕರಣ…

    ಕೋವಿಡ್‌ನಿಂದ ಮೃತಪಟ್ಟ ಶಿಕ್ಷಕರಿಗೆ ತಕ್ಷಣ ಪರಿಹಾರ ನೀಡಿ; ಶಿಕ್ಷಣ ಇಲಾಖೆ ಆಯುಕ್ತರಿಂದ ಜಿಲ್ಲಾಧಿಕಾರಿಗಳಿಗೆ ಪತ್ರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts