More

    ಮನೆಯ ಗೋಡೆ ಕುಸಿದು ಬಿದ್ದು ಇಬ್ಬರ ದುರ್ಮರಣ; ಹಳೇ ಮನೆ ಗೋಡೆ ತೆರವುಗೊಳಿಸುವಾಗ ಅವಘಡ..

    ಉತ್ತರಕನ್ನಡ: ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಗಂಭೀರ ಗಾಯಗೊಂಡು ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದಲ್ಲಿ ಈ ದುರ್ಘಟನೆ ಸಂಭವಿಸಿದೆ.

    ಅಂಕೋಲಾ ತಾಲೂಕಿನ ಬಾವಿಕೇರಿಯಲ್ಲಿ ಈ ದುರಂತ ಸಂಭವಿಸಿದ್ದು, ಬಾವಿಕೇರಿ ನಿವಾಸಿಗರಾದ ಮಧುಕರ ಸುಬ್ರಾಯ ನಾಯಕ (58), ಶಾಂತಾರಾಮ ನಾರಾಯಣ ನಾಯಕ (58) ಎಂಬವರು ಸಾವಿಗೀಡಾಗಿದ್ದಾರೆ. ಮಧುಕರ ಅವರ ಹಳೆಯ ಮನೆಯ ಗೋಡೆ ತೆರವುಗೊಳಿಸುವಾಗ ಈ ಅವಘಡ ಸಂಭವಿಸಿದೆ.

    ಹಳೇಮನೆಯ ಗೋಡೆಯ ಕುಸಿದು ಮಧುಕರ ಮತ್ತು ಶಾಂತಾರಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಅವರನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆ ಇಬ್ಬರೂ ಸಾವಿಗೀಡಾದರು. ಅಂಕೋಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಹೆಂಡ್ತಿ ಜತೆ ಜಗಳವಾಡಿ ಬಂದವನ ಕಂಡು ನಾಯಿ ಬೊಗಳಿತು; ಸಿಟ್ಟಾದ ಆತ ಅದರ ಒಡತಿಯನ್ನೇ ಕೊಂದ!

    ನಾಡಿದ್ದೇ ಚಲಾವಣೆಗೆ ಬರಲಿದೆ ಡಿಜಿಟಲ್ ಕರೆನ್ಸಿ; ಪ್ರಾಯೋಗಿಕವಾಗಿ ಎಲ್ಲೆಲ್ಲಿ ಜಾರಿ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts