ನೆಲಮಂಗಲ: ಟ್ರ್ಯಾಕ್ಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರಿನ ಮಲ್ಲಸಂದ್ರದ ಕೃಷ್ಣಪ್ಪ (55), ಹುಬ್ಬಳ್ಳಿಯ ಕೂಲಿಕಾರ್ಮಿಕ ಬಸವರಾಜು (27) ಮೃತಪಟ್ಟವರು.
ನೆಲಮಂಗಲ ತಾಲೂಕು ಲಕ್ಕೂರು ಗ್ರಾಮದ ಬಳಿ ಇಂದು ರಾತ್ರಿ ಈ ಭೀಕರ ಅಪಘಾತ ಸಂಭವಿಸಿದೆ. ನೀಲಗಿರಿ ಸೌದೆ ತುಂಬಿಕೊಂಡು ಚಲಿಸುತ್ತಿದ್ದ ಟ್ರಾಕ್ಟರ್ಗೆ ವೇಗವಾಗಿ ಬರುತ್ತಿದ್ದ ಕಾರು ಹಿಂದಿನಿಂದ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಕಾರಿನಲ್ಲಿದ್ದ ಕೃಷ್ಣಪ್ಪ ಹಾಗೂ ಟ್ರ್ಯಾಕ್ಟರ್ನಲ್ಲಿದ್ದ ಬಸವರಾಜು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಕಾರಿನಲ್ಲಿದ್ದ ಇನ್ನಿಬ್ಬರಿಗೆ ಗಂಭೀರವಾದ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ. ದಾಬಸ್ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಆ ಭಾಗ ಸ್ವಲ್ಪ ಕಾಣಿಸ್ತಿದೆ ಅಂತ ಜಿಮ್ನಿಂದ್ಲೇ ಹೊರಗೆ ಕಳಿಸಿದ್ರಂತೆ!; ಅವಮಾನ ಆಯಿತೆಂದು ವಿಡಿಯೋ ಮಾಡಿ ಅತ್ತಳು…
ಸೀಟ್ ಹಿಂದಿನಿಂದ ಕೈ ತೂರಿಸಿ ಅಲ್ಲೇ ಮುಟ್ಟಲು ಯತ್ನಿಸುತ್ತಿದ್ದ; ಅಸಹ್ಯ ಅನುಭವ ಬಿಚ್ಚಿಟ್ಟ ಯುವತಿ
ನಾಪತ್ತೆಯಾದ ಹದಿನಾಲ್ಕರ ಹುಡುಗಿ 2 ವರ್ಷಗಳ ಬಳಿಕ 4 ತಿಂಗಳ ಮಗುವಿನೊಂದಿಗೆ ಪತ್ತೆಯಾದಳು!
ತಮ್ಮನ ಮದ್ವೆಗಾಗಿ 2 ದಿನ ರಜೆ ತೆಗೆದುಕೊಳ್ಳಲಿಕ್ಕೂ ಪತ್ರ ಬರೆದು ಕೋರಿಕೊಂಡ ಗ್ರಾಮ ಪಂಚಾಯತ್ ಸದಸ್ಯ!
ಬನ್ನೇರುಘಟ್ಟ ಕಾಡಂಚಲ್ಲಿ 30ಕ್ಕೂ ಹೆಚ್ಚು ಕಾಡಾನೆಗಳು!; ಸುತ್ತಮುತ್ತಲ ನಿವಾಸಿಗರಲ್ಲಿ ಭಾರಿ ಆತಂಕ..