ರಾತ್ರಿ ಪಾಳಿಯಲ್ಲಿ ನಿದ್ರಿಸುತ್ತಿದ್ದ ಪೊಲೀಸರಿಬ್ಬರ ಅಮಾನತು!

ಬೆಂಗಳೂರು: ರಾತ್ರಿ ಪಾಳಿಯಲ್ಲಿ ನಿದ್ರಿಸುತ್ತಿದ್ದ ಹೆಡ್ ಕಾನ್‌ಸ್ಟೆಬಲ್ ಹಾಗೂ ಕಾನ್‌ಸ್ಟೆಬಲ್ ಅವರನ್ನು ಕರ್ತವ್ಯಲೋಪದ ಆರೋಪದಡಿ ಅಮಾನತುಗೊಳಿಸಿ ವೈಟ್‌ಫೀಲ್ಡ್ ವಿಭಾಗದ ಡಿಸಿಪಿ ಎಸ್.ಗಿರೀಶ್ ಆದೇಶಿಸಿದ್ದಾರೆ. ಮಹದೇವಪುರ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಎ.ಎನ್.ಜಯರಾಮ್ ಹಾಗೂ ಕಾನ್‌ಸ್ಟೆಬಲ್ ಈರಪ್ಪ ಉಂಡಿ ಅಮಾನತಿಗೊಳಗಾದವರು. ಜು.9ರ ರಾತ್ರಿ ಠಾಣೆಯ ಎಸ್‌ಎಚ್‌ಒ ಪ್ರಭಾರದಲ್ಲಿದ್ದಾಗ ಈ ಇಬ್ಬರು ಸಿಬ್ಬಂದಿ ರಾತ್ರಿ ಪಾಳಿಯಲ್ಲಿದ್ದರು. ಡಿಸಿಪಿಯವರು ಠಾಣೆಗೆ ಭೇಟಿ ನೀಡಿದಾಗ ಇಬ್ಬರೂ ನಿದ್ರಿಸುತ್ತಿರುವುದು ಕಂಡು ಬಂದಿದೆ. ಇದನ್ನೂ ಓದಿ: ನಿಮ್ಮ ಏರಿಯಾಗೆ ಹೊಸ ಸಬ್​ ಇನ್​ಸ್ಪೆಕ್ಟರ್​?; 61 ಪಿಎಸ್​ಐಗಳ ವರ್ಗಾವಣೆ, ಇಲ್ಲಿದೆ … Continue reading ರಾತ್ರಿ ಪಾಳಿಯಲ್ಲಿ ನಿದ್ರಿಸುತ್ತಿದ್ದ ಪೊಲೀಸರಿಬ್ಬರ ಅಮಾನತು!