More

    ಕರ್ತವ್ಯನಿರತ ಪೊಲೀಸರ ಮೇಲೆ ಹರಿದ ಲಾರಿ: ಡ್ರೈವರ್​, ಕ್ಲೀನರ್​ ಸ್ಥಳದಿಂದ ಪರಾರಿ..!

    ವಿಜಯವಾಡ: ಲಾರಿ ಹರಿದು ಕರ್ತವ್ಯನಿರತ ಪೊಲೀಸರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.

    ಮುಖ್ಯ ಪೊಲೀಸ್​ ಪೇದೆ ಸತ್ಯನಾರಾಯಣ ಮತ್ತು ಹೋಮ್​ ಗಾರ್ಡ್​ ಎನ್​. ಎಸ್​. ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಾಕಿನಾಡದ ತಿಮ್ಮಾಪುರಂ ಪೊಲೀಸ್​ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ವಿಜಯವಾಡದಿಂದ ಬರುತ್ತಿದ್ದ ಲಸಿಕಾ ವಾಹನದ ಬೆಂಗಾವಲು ಸೇವೆಯಲ್ಲಿದ್ದರು.

    ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಇಬ್ಬರ ಮೇಲೆ ಹರಿದಿದ್ದು, ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್​ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕಾಕಿನಾಡ ಡಿಎಸ್​ಪಿ ಭೀಮಾರಾವ್​ ಮತ್ತು ಪೊಲೀಸ್​ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಲಾರಿ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. (ಏಜೆನ್ಸೀಸ್​)

    ಆತ್ಮಹತ್ಯೆ ಸ್ಥಿತಿಯಲ್ಲಿ ನಟ ಉನ್ನಿ ರಾಜನ್​ ಪತ್ನಿಯ ಶವ ಪತ್ತೆ: ಬೆನ್ನ ಹಿಂದಿನ ಗುರುತು ಬಿಚ್ಚಿಟ್ಟ ಕರಾಳ ಕತೆ ಇದು

    ಪಿಎಂ ಕಿಸಾನ್ ಸಮ್ಮಾನ್ ನಿಧಿಯ 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ಅಕ್ಷಯ ತೃತೀಯದಂದೇ ರೈತರಿಗೆ ಸಿಹಿ

    ಸೋನಿಯಾಗೆ ಹೆರಿಗೆ ಮಾಡಿಸಿದ್ದ ಸ್ತ್ರೀರೋಗ ತಜ್ಞೆ ಕೋವಿಡ್‌ನಿಂದ ಸಾವು- ಎರಡೂ ಲಸಿಕೆ ಪಡೆದಿದ್ದ ವೈದ್ಯೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts