ವಿಜಯವಾಡ: ಲಾರಿ ಹರಿದು ಕರ್ತವ್ಯನಿರತ ಪೊಲೀಸರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಪೂರ್ವ ಗೋದಾವರಿ ಜಿಲ್ಲೆಯಲ್ಲಿ ನಡೆದಿದೆ.
ಮುಖ್ಯ ಪೊಲೀಸ್ ಪೇದೆ ಸತ್ಯನಾರಾಯಣ ಮತ್ತು ಹೋಮ್ ಗಾರ್ಡ್ ಎನ್. ಎಸ್. ರೆಡ್ಡಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಕಾಕಿನಾಡದ ತಿಮ್ಮಾಪುರಂ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ವಿಜಯವಾಡದಿಂದ ಬರುತ್ತಿದ್ದ ಲಸಿಕಾ ವಾಹನದ ಬೆಂಗಾವಲು ಸೇವೆಯಲ್ಲಿದ್ದರು.
ಗುರುವಾರ ತಡರಾತ್ರಿ 2 ಗಂಟೆ ಸುಮಾರಿಗೆ ಇಬ್ಬರ ಮೇಲೆ ಹರಿದಿದ್ದು, ಸ್ಥಳದಲ್ಲೇ ಲಾರಿ ನಿಲ್ಲಿಸಿ ಚಾಲಕ ಮತ್ತು ಕ್ಲೀನರ್ ಪರಾರಿ ಆಗಿದ್ದಾರೆ. ಘಟನಾ ಸ್ಥಳಕ್ಕೆ ಕಾಕಿನಾಡ ಡಿಎಸ್ಪಿ ಭೀಮಾರಾವ್ ಮತ್ತು ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಲಾರಿ ಅಡಿಯಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆದು ಕಾಕಿನಾಡ ಸರ್ಕಾರಿ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿದೆ. (ಏಜೆನ್ಸೀಸ್)
ಆತ್ಮಹತ್ಯೆ ಸ್ಥಿತಿಯಲ್ಲಿ ನಟ ಉನ್ನಿ ರಾಜನ್ ಪತ್ನಿಯ ಶವ ಪತ್ತೆ: ಬೆನ್ನ ಹಿಂದಿನ ಗುರುತು ಬಿಚ್ಚಿಟ್ಟ ಕರಾಳ ಕತೆ ಇದು
ಪಿಎಂ ಕಿಸಾನ್ ಸಮ್ಮಾನ್ ನಿಧಿಯ 8ನೇ ಕಂತು ಬಿಡುಗಡೆ ಮಾಡಿದ ಪ್ರಧಾನಿ ಮೋದಿ: ಅಕ್ಷಯ ತೃತೀಯದಂದೇ ರೈತರಿಗೆ ಸಿಹಿ
ಸೋನಿಯಾಗೆ ಹೆರಿಗೆ ಮಾಡಿಸಿದ್ದ ಸ್ತ್ರೀರೋಗ ತಜ್ಞೆ ಕೋವಿಡ್ನಿಂದ ಸಾವು- ಎರಡೂ ಲಸಿಕೆ ಪಡೆದಿದ್ದ ವೈದ್ಯೆ