ಇಲ್ಲಿ ಪೊಲೀಸರೇ ಕಳ್ಳರು!: ಕಳ್ಳಸಾಗಣೆದಾರರಿಂದಲೇ ರಕ್ತಚಂದನ ದೋಚುತ್ತಿದ್ದ ಪೊಲೀಸರಿಬ್ಬರ ಬಂಧನ

blank

ಬೆಂಗಳೂರು: ಒಂದೇ ಮಾತಿನಲ್ಲಿ ಹೇಳುವುದಾದರೆ ಇವರಿಬ್ಬರು ಕಳ್ಳಪೊಲೀಸರು. ಅಂದರೆ ಪೊಲೀಸರಾಗಿದ್ದರೂ ಕಳ್ಳತನಕ್ಕೆ ಇಳಿದು ಇದೀಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಈ ಇಬ್ಬರು ಕಳ್ಳಪೊಲೀಸರನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ.

ಸಿಸಿಬಿ ಹೆಡ್ ಕಾನ್​ಸ್ಟೆಬಲ್ ಮೋಹನ್, ಮಹದೇವಪುರ ಠಾಣೆಯ ಹೆಡ್​ ಕಾನ್​ಸ್ಟೆಬಲ್​ ಮಮ್ತೇಶ್ ಗೌಡ ಬಂಧಿತ ಪೊಲೀಸರು. ಇವರಿಬ್ಬರನ್ನು ಬಂಧಿಸಿರುವ ಹೊಸಕೋಟೆ ಪೊಲೀಸರು ಎಫ್​ಐಆರ್​ ದಾಖಲಿಸಿದ್ದಾರೆ.

ಇವರು ಕಳ್ಳಸಾಗಣೆ ಮಾಡುತ್ತಿದ್ದವರನ್ನು ತಡೆದು ಪೊಲೀಸರು ಎಂದು ಬೆದರಿಸಿ ಅವರಲ್ಲಿದ್ದ ರಕ್ತಚಂದನವನ್ನು ದೋಚುತ್ತಿದ್ದರು. ಹೀಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆಯಲ್ಲಿ ಕಳೆದ ಡಿ. 15ರಂದು ಟಾಟಾ ಏಸ್​ವೊಂದನ್ನು ತಡೆದು ಸ್ಮಗ್ಲರ್ಸ್​ಗೆ ಬೆದರಿಸಿ ಲಕ್ಷಾಂತರ ರೂಪಾಯಿ ಮೌಲ್ಯದ ರಕ್ತಚಂದನವನ್ನು ದೋಚಿದ್ದ ಇವರು ಈಗ ಪೊಲೀಸರ ಕೈಗೆ ಸಿಕ್ಕಿಹಾಕಿಕೊಂಡಿದ್ದಾರೆ.

Share This Article

ನಿಮ್ಮ ಸ್ಮಾರ್ಟ್​ಫೋನ್​ ನಿಮ್ಮ ಫಿಟ್​ನೆಸ್​ ಕೋಚ್​… ಆಶ್ಚರ್ಯವಾಯಿತೇ? ಇಲ್ಲಿದೆ ಅಚ್ಚರಿ ಮಾಹಿತಿ… Smartphone

Smartphone : ಸ್ಮಾರ್ಟ್‌ಫೋನ್‌ಗಳ ಮೇಲಿನ ಅವಲಂಬನೆ ದಿನೇ ದಿನೇ ಹೆಚ್ಚಾಗುತ್ತಿದೆ. ಒಂದು ಅಧ್ಯಯನದ ಪ್ರಕಾರ, 2040ರ…

ಈ ದಿನಾಂಕಗಳಂದು ಜನಿಸಿದವರು ತಮ್ಮ ಬುದ್ಧಿವಂತಿಕೆಯಿಂದಾಗಿ ರಾಯಲ್​ ಲೈಫ್​ ನಡೆಸುತ್ತಾರೆ! Numerology

Numerology : ಜ್ಯೋತಿಷ್ಯದಲ್ಲಿ ಅನೇಕ ಬಗೆಗಳಿರುವುದು ಎಲ್ಲರಿಗೂ ತಿಳಿದಿದೆ. ಅವುಗಳಲ್ಲಿ ಸಂಖ್ಯಾಶಾಸ್ತ್ರ ಮತ್ತು ಹಸ್ತಸಾಮುದ್ರಿಕ ಶಾಸ್ತ್ರವೂ…

ನೀವು ಬೆಳಿಗ್ಗೆ ತಿಂಡಿಯನ್ನು ತಡವಾಗಿ ತಿನ್ನುತ್ತೀರಾ? ಎಚ್ಚರ..ಈ ಕಾಯಿಲೆ ಬರೋದು ಪಕ್ಕಾ… breakfast

breakfast: ಬೆಳಗಿನ ಉಪಾಹಾರವು ದೇಹಕ್ಕೆ ಬಹಳ ಮುಖ್ಯ. ಯಾವುದೇ ಕಾರಣಕ್ಕೂ ಉಪಹಾರವನ್ನು ಬಿಡಬಾರದು. ತಡವಾಗಿ ತಿನ್ನುವುದು…